Monday, June 23, 2025
26.6 C
Bengaluru
Google search engine
LIVE
ಮನೆ#Exclusive Newsಗ್ರೇಟರ್ ಬೆಂಗಳೂರು ವಿಧೇಯಕ ಪರಾಮರ್ಶೆಗೆ ಸದನ ಸಮಿತಿ ರಚನೆಗೆ ಒಪ್ಪಿಗೆಯಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

ಗ್ರೇಟರ್ ಬೆಂಗಳೂರು ವಿಧೇಯಕ ಪರಾಮರ್ಶೆಗೆ ಸದನ ಸಮಿತಿ ರಚನೆಗೆ ಒಪ್ಪಿಗೆಯಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು, ಜುಲೈ 25:

ಬೆಂಗಳೂರಿಗೆ ಆರ್ಥಿಕ ಶಕ್ತಿ ಹಾಗೂ ಆಡಳಿತದಲ್ಲಿ ಹೊಸ ರೂಪ ನೀಡುವ ಉದ್ದೇಶದಿಂದ ರೂಪಿಸಲಾಗಿರುವ ಗ್ರೇಟರ್ ಬೆಂಗಳೂರು ವಿಧೇಯಕವನ್ನು ಪರಾಮರ್ಶಿಸಲು ಸದನ ಸಮಿತಿ ರಚನೆಗೆ ನಮ್ಮ ಒಪ್ಪಿಗೆ ಇದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ವಿಧೇಯಕವನ್ನು ಪರ್ಯಾಲೋಚನೆ ಪ್ರಸ್ತಾಪಿಸಿ ಗುರುವಾರ ಮಾತನಾಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು, “ಬೆಂಗಳೂರು ದೊಡ್ಡ ಮಟ್ಟದಲ್ಲಿ ಬೆಳೆಯುತ್ತಿದ್ದು, ನಗರದ ಜನಸಂಖ್ಯೆ 1.40 ಕೋಟಿಗೆ ಏರಿದೆ. ಬೆಂಗಳೂರನ್ನು ಅತ್ಯುತ್ತಮ ನಗರವಾಗಿ ಮಾಡಬೇಕು. ಅಂತರರಾಷ್ಟೀಯ ಮಟ್ಟದಲ್ಲಿ ಬೆಂಗಳೂರು ಹೆಸರು ಮಾಡುತ್ತಿದ್ದು, ರಾಜ್ಯ ರಾಜಧಾನಿಗೆ ಹೊಸ ರೂಪ ನೀಡಲು ಗ್ರೇಟರ್ ಬೆಂಗಳೂರು ಬಿಲ್ ಗೆ ಹೊಸದಾಗಿ ಪ್ರಸ್ತಾವನೆ ಸಲ್ಲಿಸುತ್ತಿದ್ದೇನೆ” ಎಂದು ಹೇಳಿದರು.ಈ ವೇಳೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮತ್ತು ಶಾಸಕ ಎಸ್.ಟಿ.ಸೋಮಶೇಖರ್ ಅವರು ಮಾತನಾಡಿ ಬೆಂಗಳೂರಿನ ಶಾಸಕರು, ವಿಧಾನಪರಿಷತ್ ಸದಸ್ಯರು ಸೇರಿದ ಸದನ ಸಮಿತರಚಿಸಬೇಕು. ವಿಶೇಷ ಚರ್ಚೆ ಮಾಡಬೇಕು. ಬಿಲ್ ಅನ್ನು ಬಾಕಿ ಇರಿಸಬೇಕು ಎಂದು ಎಂದು ಮನವಿ ಮಾಡಿದರು , ಇದಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು, “ಅಶೋಕ್ ಹಾಗೂ ಸೋಮಶೇಖರ್ ಅವರು ಚರ್ಚೆ ನಡೆಸಬೇಕು ಎಂದು ಹೇಳಿದ್ದಾರೆ. ಬೆಂಗಳೂರಿನ ಶಾಸಕರಾದ ಸತೀಶ್ ರೆಡ್ಡಿ, ರಾಮಮೂರ್ತಿ ಅವರು ನನ್ನನ್ನು ಭೇಟಿ ಮಾಡಿ ಒಂದಷ್ಟು ವಿಚಾರಗಳನ್ನು ಚರ್ಚೆ ಮಾಡಿದ್ದಾರೆ. ನಮಗೂ ಸಹ ತರಾತುರಿಯಲ್ಲಿ ಈ ಬಿಲ್ ಅನ್ನು ತರುವ ಆಲೋಚನೆ ಇಲ್ಲ. ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್, ರಿಜ್ವಾನ್ ಅರ್ಷದ್, ಕೃಷ್ಣಬೈರೇಗೌಡ ಅವರ ಬಳಿಯೂ ಈ ವಿಚಾರವಾಗಿ ಚರ್ಚೆ ನಡೆಸಿದ್ದೇನೆ. ಈ ವಿಚಾರವಾಗಿ ಸದನ ಸಮಿತಿ ರಚನೆ ಮಾಡಲು ನಮ್ಮ ಒಪ್ಪಿಗೆಯಿದೆ” ಎಂದು ಹೇಳಿದರು.

 

ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments