Monday, June 23, 2025
26.6 C
Bengaluru
Google search engine
LIVE
ಮನೆ#Exclusive NewsTop Newsಜೈಲಿನಲ್ಲೇ ರಾತ್ರಿ ಕಳೆದ ಅಲ್ಲು ಅರ್ಜುನ್; ಮುಂಜಾನೆಯೇ ಬಿಡುಗಡೆ

ಜೈಲಿನಲ್ಲೇ ರಾತ್ರಿ ಕಳೆದ ಅಲ್ಲು ಅರ್ಜುನ್; ಮುಂಜಾನೆಯೇ ಬಿಡುಗಡೆ

ಅಮರಾವತಿ: ‘ಪುಷ್ಪ 2’ ಚಿತ್ರದ ಪ್ರೀಮಿಯರ್‌ ಶೋ ವೇಳೆ ಉಂಟಾದ ನೂಕುನುಗ್ಗಲಿನಿಂದ ಕಾಲ್ತುಳಿತಕ್ಕೆ ಮಹಿಳೆಯೊಬ್ಬರು ಸಾವನ್ನಪ್ಪಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ನಟ ಅಲ್ಲು ಅರ್ಜುನ್‌ ಇಂದು ಬೆಳಗ್ಗೆ ಬಿಡುಗಡೆಯಾಗಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಶುಕ್ರವಾರ ನಟನನ್ನು ಹೈದರಾಬಾದ್‌ ಪೊಲೀಸರು ಬಂಧಿಸಿದ್ದರು. ಬಳಿಕ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಕೋರ್ಟ್‌ 14 ದಿನ ನ್ಯಾಯಾಂಗ ಬಂಧನ ವಿಧಿಸಿತು. ಆದರೆ, ಸಂಜೆ ವೇಳೆಗೆ ತೆಲಂಗಾಣ ಹೈಕೋರ್ಟ್‌ ನಟನಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಸಂಧ್ಯಾ ಥಿಯೇಟರ್ ಘಟನೆ ಹಿನ್ನೆಲೆಯಲ್ಲಿ ಪೊಲೀಸರು ಅಲ್ಲು ಅರ್ಜುನ್ ಅವರನ್ನು ಆರೋಪಿ ಸ್ಥಾನದಲ್ಲಿ ಇರಿಸಿದ್ದಾರೆ. ‘ಪುಷ್ಪ 2’ ಚಿತ್ರದ ಪ್ರೀಮೀಯರ್ ಪ್ರದರ್ಶನದ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಥಿಯೇಟರ್‌ಗೆ ಹೋಗಿದ್ದರು. ಅಲ್ಲು ಅರ್ಜುನ್ ಆಗಮನದಿಂದ ಅಭಿಮಾನಿಗಳು ಒಮ್ಮೆಲೇ ಮುಗಿಬಿದ್ದರು. ಈ ಕಾರಣಕ್ಕೆ ಕಾಲ್ತುಳಿತ ಉಂಟಾಯಿತು. ಈ ಕಾಲ್ತುಳಿತದಲ್ಲಿ ರೇವತಿ ಹೆಸರಿನ ಮಹಿಳೆ ಸಾವನ್ನಪ್ಪಿದ್ದರು. ಅವರ ಮಗನಿಗೆ ಗಾಯಗಳಾಗಿವೆ. ಈ ಘಟನೆಗೆ ಸಂಬಂಧಿಸಿ ರೇವತಿ ಪತಿ ದೂರು ಮಾಡಿದ್ದರು. ಈ ಬೆನ್ನಲ್ಲೇ ಎಫ್​ಐಆರ್ ದಾಖಲಿಸಿರುವ ಪೊಲೀಸರು, ಅಲ್ಲು ಅರ್ಜುನ್ ಅವರನ್ನು ಎ11 ಆರೋಪಿ ಆಗಿ ಮಾಡಿದ್ದಾರೆ. ಜೊತೆಗೆ ಅವರನ್ನು ಬಂಧಿಸಲಾಗಿದೆ.

ಅಲ್ಲು ಅರ್ಜುನ್ ಟಾಲಿವುಡ್​ನ ಬೇಡಿಕೆಯ ನಟ. ಅವರು ಪ್ರತಿಷ್ಠೆ ಕಾಯ್ದುಕೊಂಡು ಬಂದವರು. ಈವರೆಗೆ ಅವರು ಜೈಲಿಗೆ ಹೋದವರಲ್ಲ. ಆದರೆ, ಅವರು ಈಗ ಈ ಪ್ರಕರಣದಲ್ಲಿ ಜೈಲು ಹಾಗೂ ಕೋರ್ಟ್​ಗೆ ಅಲೆದಾಡುವ ಪರಿಸ್ಥಿತಿ ಬಂದೊದಗಿದೆ.

ಈ ಘಟನೆ ಅವರ ಅಭಿಮಾನಿಗಳ ಕೋಪಕ್ಕೆ ಕಾರಣ ಆಗಿದೆ. ಈ ಘಟನೆಗೆ ಸಂಬಂಧಿಸಿ ಅವರ ಫ್ಯಾನ್ಸ್ ನಿರಂತರವಾಗಿ ಆಕ್ರೋಶ ಹೊರಹಾಕುತ್ತಿದ್ದಾರೆ. ‘ಈ ಘಟನೆಯಲ್ಲಿ ಅಲ್ಲು ಅರ್ಜುನ್ ಎ11 ಆರೋಪಿ. ಉಳಿದರ ವಿರುದ್ಧ ಕ್ರಮ ಕೈಗೊಳ್ಳುವುದರ ಬದಲು ಅಲ್ಲು ಅರ್ಜುನ್ ಅವರನ್ನು ಬಂಧಿಸಿದ್ದೇಕೆ’ ಎಂದು ಅನೇಕರು ಪ್ರಶ್ನೆ ಮಾಡುತ್ತಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments