
ಬೆಂಗಳೂರು: ಕರ್ನಾಟಕ ಸರ್ಕಾರ ಅನ್ಯಭಾಗ್ಯ ಯೋಜನೆ ಅಡಿಯಲ್ಲಿ 5ಕೆ.ಜಿ ಅಕ್ಕಿ ಬದಲು ಹಣ ನೀಡುವುದನ್ನು ಫೆಬ್ರವರಿಯಿಂದ ನಿಲ್ಲಿಸಲಿದೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಅಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ. ಹೆಚ್. ಮುನಿಯಪ್ಪ, ಅಕ್ಕಿಯ ದಾಸ್ತಾನು ಸಾಕಷ್ಟಿದ್ದರೂ ಕೇಂದ್ರ ಸರ್ಕಾರ ಅದನ್ನು ನೀಡಲು ನಿರಾಕಸಿದ್ದರಿಂದ 5 ಕೆಜಿ ಅಕ್ಕಿಯ ಬದಲು ಹಣ ನೀಡಲಾಗುತಿತ್ತು, ಆದರೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಅಕ್ಕಿ ನೀಡುವ ಭರವಸೆಯನ್ನು ಕೊಟ್ಟಿರುವುದರಿಂದ ಫೆಬ್ರುವರಿ ತಿಂಗಳಿಂದ ಅನ್ನಭಾಗ್ಯ ಫಲಾನುಭವಿಗಳಿಗೆ ಪ್ರಣಾಳಿಕೆಯಲ್ಲಿ ಹೇಳಿದಂತೆ 10 ಕೆಜಿ ಅಕ್ಕಿ ನೀಡಲಾಗುವುದು ಎಂದು ಹೇಳಿದರು




