Tuesday, September 9, 2025
28.4 C
Bengaluru
Google search engine
LIVE
ಮನೆ#Exclusive NewsTop Newsಬಳ್ಳಾರಿ ಜೈಲಿಗೆ ಶಿಫ್ಟ್ ಕೋರಿದ್ದ ಅರ್ಜಿ ವಜಾ: ದರ್ಶನ್ ಗೆ ಜೈಲಲ್ಲಿ ಸಿಗಲಿದೆ ಕನಿಷ್ಠ ಸವಲತ್ತು

ಬಳ್ಳಾರಿ ಜೈಲಿಗೆ ಶಿಫ್ಟ್ ಕೋರಿದ್ದ ಅರ್ಜಿ ವಜಾ: ದರ್ಶನ್ ಗೆ ಜೈಲಲ್ಲಿ ಸಿಗಲಿದೆ ಕನಿಷ್ಠ ಸವಲತ್ತು

ಬೆಂಗಳೂರು: ನಟ ದರ್ಶನ್ ಅಂಡ್ ಗ್ಯಾಂಗ್ ಅನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಬೇಕೆಂದು ಕೋರಿದ್ದ ಅರ್ಜಿಯನ್ನು ಬೆಂಗಳೂರಿನ 64ನೇ ಸಿಸಿಎಚ್‌ ಕೋರ್ಟ್ ವಜಾ ಮಾಡಿದೆ.

ದರ್ಶನ್​​ ಅವರ ಕೆಲವು ಬೇಡಿಕೆಗಳನ್ನು ಈಡೇರಿಸಲು ಸಮ್ಮತಿಸಿದ್ದು, ಬಿಗ್ ರಿಲೀಫ್ ದೊರೆತಂತಾಗಿದೆ. A2 ದರ್ಶನ್ ಅನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲು ಸಕಾರಣಗಳಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಅಲ್ಲದೆ, ಕೊಲೆ ಆರೋಪಿ ದರ್ಶನ್​ಗೆ ಜೈಲಿನೊಳಗೆ ಓಡಾಡಲು ಅನುಮತಿ ಕೊಟ್ಟಿದೆ.

ಹೆಚ್ಚುವರಿ ದಿಂಬು ಹಾಗೂ ಬೇಡ್​​ಶೀಟ್​ಗಾಗಿ ದರ್ಶನ್ ಮಾಡಿದ್ದ ಮನವಿಯನ್ನು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯ ಪುರಸ್ಕರಿಸಿದೆ. ದರ್ಶನ್​ಗೆ ಹೆಚ್ಚುವರಿ ಹಾಸಿಗೆ ಮತ್ತು ದಿಂಬು ನೀಡಲು ಅನುಮತಿ ನೀಡಿದೆ. ಆದರೆ, ಜೈಲಿನ ಕೈಪಿಡಿ ಅನುಸರಿಸಬೇಕು ಎಂದು ನ್ಯಾಯಾಲಯ ಸೂಚನೆ ನೀಡಿದೆ.

ಜೈಲು ನಿಯಮ ಉಲ್ಲಂಘಿಸಿದರೆ ಜೈಲು ಐಜಿಯಿಂದ ಕ್ರಮ ಜರುಗಿಸಬೇಕು. ನಿಯಮ ಉಲ್ಲಂಘಿಸಿದ್ದೇ ಆದಲ್ಲಿ ಬೇರೆ ಜೈಲಿಗೆ ಸ್ಥಳಾಂತರಿಸಲು ಐಜಿ ಕ್ರಮ ಕೈಗೊಳ್ಳಬಹುದು ಎಂದೂ ಆದೇಶದಲ್ಲಿ ನ್ಯಾಯಾಲಯ ತಿಳಿಸಿದೆ.

 

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments