#Exclusive NewsTop Newsಜಿಲ್ಲೆರಾಜ್ಯಸುದ್ದಿ
ರಾಜ್ಯದಲ್ಲಿ ಆರದ ಅಂಬೇಡ್ಕರ್ ಆಕ್ರೋ‘ಶಾ‘..!

ಮೈಸೂರು : ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ವಿವಾದಾದ್ಮಕ ಹೇಳಿಕೆಯನ್ನು ಖಂಡಿಸಿ ವಿವಿಧ ಸಂಘಟನೆಗಳು ಮಂಗಳವಾರ ಮೈಸೂರು ಹಾಗೂ ಮಂಡ್ಯ ಬಂದ್ಗೆ ಕರೆ ನೀಡಿವೆ. ಆದರೆ, ಮೈಸೂರಿನಲ್ಲಿ ಬೆಳಗ್ಗೆ ಎಂದಿನಂತೆಯೇ ಬಸ್ ಸಂಚಾರ ಆರಂಭವಾಗಿದ್ದು, ಜನರಿಗೆ ಬಂದ್ ಬಿಸಿ ತಟ್ಟಿಲ್ಲ. ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಸಹಜ ಸ್ಥಿತಿ ಇದೆ. ಅದೇ ರೀತಿ, ಮೈಸೂರಿನಿಂದ ಬೆಂಗಳೂರು ಸೇರಿದಂತೆ ವಿವಿಧೆಡೆಗೆ ಎಂದಿನಂತೆಯೇ ಬಸ್ಗಳು ತೆರಳುತ್ತಿವೆ.
ಮೈಸೂರು ಬಂದ್ಗೆ ದಲಿತ ಪರ ಸಂಘಟನೆಗಳು , ರೈತ ಪರ ಸಂಘಟನೆಗಳು, ಮುಸ್ಲಿಂ ಸಂಘಟನೆಗಳು, ಕಾರು ಚಾಲಕರ ಸಂಘಟನೆಗಳು, ಬೀದಿ ಬದಿ ವ್ಯಾಪಾರಿಗಳು ಬೆಂಬಲ ಸೂಚಿಸಿದ್ದು, ಬೆಳಗ್ಗೆಯಿಂದ ಮಧ್ಯಾಹ್ನ 4 ಗಂಟೆ ವರೆಗೆ ಬಂದ್ ನಡೆಯಲಿದೆ ಎಂದು ಮಾಜಿ ಮೇಯರ್ ಪುರುಷೋತ್ತಮ್ ಹೇಳಿದ್ದಾರೆ.ಮುಂಜಾಗ್ರತಾ ಕ್ರಮವಾಗಿ ಮೈಸೂರು ಬಸ್ ನಿಲ್ದಾಣದ ಬಳಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಗಸ್ತು ವಾಹನ, ಕಮಾಂಡೋ ವಾಹನ ನಿಯೋಜನೆ ಮಾಡಲಾಗಿದೆ.
ಮಂಡ್ಯದಲ್ಲಿಯೂ ಸಹಜ ಸ್ಥಿತಿ
ಮಂಡ್ಯದಲ್ಲಿ ಕೂಡ ಬೆಳಗ್ಗೆ ಎಂದಿನಂತೆಯೇ ಬಸ್ ಸಂಚಾರ ನಡೆಯುತ್ತಿದೆ. ಸಾರಿಗೆ ಬಸ್ಗಳು ಮಂಡ್ಯದಿಂದ ಬೇರೆಡೆಗೆ ತೆರಳುತ್ತಿವೆ. ವ್ಯಾಪಾರ ವಹಿವಾಟು ಕೂಡ ಎಂದಿನಂತೆಯೇ ಆರಂಭವಾಗುತ್ತಿವೆ. ಮುಂಜಾಗ್ರತಾ ಕ್ರಮವಾಗಿ ಮಂಡ್ಯ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಇನ್ನೂ ಬಂದ್ ಬಿಸಿ ಆರಂಭವಾಗಿಲ್ಲ




