Tuesday, June 24, 2025
25.9 C
Bengaluru
Google search engine
LIVE
ಮನೆ#Exclusive Newsಎನ್​ಕೌಂಟರ್ ಮಾಡಿ ಐವರು ಉಗ್ರರ ಹತ್ಯೆಗೈದ ಜಮ್ಮು-ಕಾಶ್ಮೀರದಲ್ಲಿ ಸೇನೆ

ಎನ್​ಕೌಂಟರ್ ಮಾಡಿ ಐವರು ಉಗ್ರರ ಹತ್ಯೆಗೈದ ಜಮ್ಮು-ಕಾಶ್ಮೀರದಲ್ಲಿ ಸೇನೆ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ಮುಂದುವರೆದಿದೆ. ಎನ್​ಕೌಂಟರ್​ನಲ್ಲಿ ಯೋಧರು ಐವರು ಉಗ್ರರನ್ನು ಸದೆಬಡಿದಿದ್ದಾರೆ. ಈ ಎನ್‌ಕೌಂಟರ್ ಕುಲ್ಗಾಮ್‌ನ ಬೆಹಿಬಾಗ್ ಪ್ರದೇಶದಲ್ಲಿ ನಡೆದಿದೆ.ಇಬ್ಬರು ಭಯೋತ್ಪಾದಕರ ಮಾಹಿತಿಯ ಮೇರೆಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಸೇನೆಯು ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.

ಎನ್​ಕೌಂಟರ್​ ಸಮಯದಲ್ಲಿ ಅವರ ಸಂಖ್ಯೆ ಹೆಚ್ಚಿದೆ ಎಂದು ತಿಳಿದುಬಂದಿತ್ತು. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ಇನ್ನೂ ಹೆಚ್ಚಿನ ಉಗ್ರರು ಅಡಗಿರುವ ಶಂಕೆ ವ್ಯಕ್ತವಾಗಿದೆ. ಈ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಮಾಹಿತಿ ಇತ್ತು, ನಂತರ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದವು. ಪರಿಸ್ಥಿತಿ ಉದ್ವಿಗ್ನವಾಗಿದೆ.

ಪೊಲೀಸರು ಮತ್ತು ಭದ್ರತಾ ಪಡೆಗಳ ಜಂಟಿ ತಂಡವು ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿ ಪಡೆದ ನಂತರ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಇತ್ತೀಚಿನ ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಅನೇಕ ಎನ್‌ಕೌಂಟರ್‌ಗಳು ಹೆಚ್ಚಾಗಿವೆ.

ಅದರಲ್ಲಿ ಅನೇಕ ಭಯೋತ್ಪಾದಕರು ಮತ್ತು ಅವರ ಕಮಾಂಡರ್‌ಗಳು ಕೊಲ್ಲಲ್ಪಟ್ಟಿದ್ದಾರೆ. ಈ ವೇಳೆ ಭದ್ರತಾ ಪಡೆ ಸಿಬ್ಬಂದಿಗೂ ಗಾಯಗಳಾಗಿವೆ. ಕಾಶ್ಮೀರದ ಶ್ರೀನಗರ ಮತ್ತು ಜಮ್ಮುವಿನ ಚೆನಾಬ್ ಕಣಿವೆ, ಉಧಮ್‌ಪುರ ಮತ್ತು ಕಥುವಾ ಪ್ರದೇಶಗಳಂತಹ ಜಮ್ಮು ಮತ್ತು ಕಾಶ್ಮೀರದ ಪ್ರದೇಶಗಳಲ್ಲಿ ಇದುವರೆಗೆ ಅಂತಹ ಘಟನೆಗಳಿಂದ ಮುಕ್ತವಾಗಿದ್ದ ಪ್ರದೇಶಗಳಲ್ಲೂ ಈಗ ಭಯೋತ್ಪಾದಕ ಚಟುವಟಿಕೆಗಳು ಹರಡುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ.

ಆಧುನಿಕ ಶಸ್ತ್ರಾಸ್ತ್ರಗಳ ಬಳಕೆಯಿಂದ ಅಪಾಯ ಹೆಚ್ಚಾಗಿದೆ, ಕಾಶ್ಮೀರ ಕಣಿವೆಯನ್ನು ಜಮ್ಮುವಿನಿಂದ ವಿಭಜಿಸುವ ಪಿರ್ ಪಂಜಾಲ್ ಪ್ರದೇಶದಲ್ಲಿ ಕಳೆದ ಕೆಲವು ವರ್ಷಗಳಿಂದ ಭಯೋತ್ಪಾದನೆಯ ಉಲ್ಬಣವು ಕಂಡುಬಂದಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಭಯೋತ್ಪಾದನೆಯನ್ನು ಎದುರಿಸಲು ಸಮಗ್ರ ಕಾರ್ಯತಂತ್ರದ ಅಗತ್ಯವಿದೆ ಎಂದು ವಿಶ್ಲೇಷಕರು ಹೇಳುತ್ತಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments