Tuesday, June 24, 2025
25.9 C
Bengaluru
Google search engine
LIVE
ಮನೆUncategorizedದೊಡ್ಡ ನಟನ ಹೆಸರು ಇದರಲ್ಲಿ ಕೇಳಿ ಬಂದ ತಕ್ಷಣ ಹಲವು ಅನುಮಾನಗಳು ಹುಟ್ಟುತ್ತವೆ- ಜಗದೀಶ್ ಶೆಟ್ಟರ್

ದೊಡ್ಡ ನಟನ ಹೆಸರು ಇದರಲ್ಲಿ ಕೇಳಿ ಬಂದ ತಕ್ಷಣ ಹಲವು ಅನುಮಾನಗಳು ಹುಟ್ಟುತ್ತವೆ- ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ರೇಣುಕಾಸ್ವಾಮಿ ಕೊಲೆ ರಾಕ್ಷಸಿ ಕೃತ್ಯವಾಗಿದೆ. ಈ ಕೊಲೆಯ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಬೆಳಗಾವಿ ನೂತನ ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇಣುಕಾಸ್ವಾಮಿ ಕೊಲೆಯಲ್ಲಿ ನಟ ದರ್ಶನ ಅವರ ಹೆಸರು ಬಂದಿದೆ. ದರ್ಶನ ಹಿಂಬಾಲಕರು ಈ ಹತ್ಯೆ ಮಾಡಿದ್ದಾರೆ ಎಂಬ ಸುದ್ದಿಗಳು ಬರುತ್ತಿವೆ ಎಂದರು.

ರೇಣುಕಾಸ್ವಾಮಿ ಸೊಸಿಯಲ್ ಮೀಡಿಯಾದಲ್ಲಿ ಅಸಭ್ಯವಾಗಿ ವರ್ತಿಸಿದ್ದರೆ ಅದಕ್ಕೆ ಸೈಬರ್ ಠಾಣೆ ಇತ್ತು. ಅವೆಲ್ಲವನ್ನೂ ಬಿಟ್ಟು ತಾವೇ ಈ ರೀತಿ ಕಾನೂನು ಕೈಗೆತ್ತಿಕೊಳ್ಳುವುದು ಎಷ್ಟು ಸರಿ ಈ ಕೊಲೆಯಲ್ಲಿ ಆರೋಪಿಗಳು ಎಷ್ಟೇ ದೊಡ್ಡ ವ್ಯಕ್ತಿ ಇದ್ದರೂ ಕಠಿಣ ಶಿಕ್ಷೆ ಆಗಲೇ ಬೇಕು’’ ಎಂದು ಶೆಟ್ಟರ್ ಆಗ್ರಹಿಸಿದರು.

ದೊಡ್ಡ ನಟನ ಹೆಸರು ಇದರಲ್ಲಿ ಕೇಳಿ ಬಂದ ತಕ್ಷಣ ಹಲವು ಅನುಮಾನಗಳು ಹುಟ್ಟುತ್ತವೆ. ಇಂದು ಈ‌ ಕೊಲೆಯನ್ನು ಅವರ ಹಿಂಬಾಲಕರು ಮಾಡಿದ್ದಾರೆ ಎಂಬ ಸುದ್ದಿಗಳು ಬರುತ್ತಿವೆ ಎಂದಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments