#Exclusive NewsTop Newsಫ್ರೀಡಂ ಟಿವಿ ವಿಶೇಷರಾಜಕೀಯವಿಶೇಷವೈರಲ್ ನ್ಯೂಸ್ಸುದ್ದಿ
ಸ್ನೇಹಮಯಿಯ ಭದ್ರತೆ ಕುರಿತು ಗೃಹ ಸಚಿವ ಪರಮೇಶ್ವರ್ ಹಾಗೂ ಡಿಜಿಪಿಗೆ ಬಿಜೆಪಿ ಪತ್ರ ಬರೆದ ಬಿ.ವೈ.ವಿ!

ಮುಡಾ ಹಗರಣ ಬಯಲಿಗೆಳೆದಿರುವ ಮಾಹಿತಿ ಹಕ್ಕು ಕಾರ್ಯಕರ್ತ ಹಾಗೂ ಹೋರಾಟಗಾರ ಸ್ನೇಹ ಮಯಿ ಕೃಷ್ಣ ಅವರ ಜೀವಕ್ಕೆ ಅಪಾಯ ಉಂಟಾಗುವ ಸಾಧ್ಯ ತೆ ಇರುವುದರಿಂದ ಸೂಕ್ತ ಭದ್ರತೆ ನೀಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಸಂಬಂಧ ಅವರು ಗೃಹ ಸಚಿವ ಡಾ. ಜಿ.ಪರಮೇಶ್ವರ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.
ಸ್ನೇಹಮಯಿ ಕೃಷ್ಣ ಅವರು ರಾಜ್ಯದಲ್ಲಿ ನಡೆದಿರುವ ಭ್ರಷ್ಟಾಚಾರ ಪ್ರಕರಣಗಳು ಹಾಗೂ ವಿಶೇಷವಾಗಿ ಮೈಸೂರಿನ ಮುಡಾ ಹಗರಣ ಸಂಬಂಧ ದಾಖಲೆಗಳೊಂದಿಗೆ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಈ ಮುಖಾಂತರ ಪ್ರಕರಣವನ್ನು ಬೆಳಕಿಗೆ ತರುವಲ್ಲಿ ಪ್ರಮುಖಪಾತ್ರ ವಹಿಸಿದ್ದಾರೆ. ಅವರ ಜೀವಕ್ಕೆ ಅಪಾಯ ಉಂಟಾಗುವ ಸಾಧ್ಯತೆ ಇರುವುದರಿಂದ ಸೂಕ್ತ ಭದ್ರತೆ ನೀಡುವಂತೆ ವಿಜಯೇಂದ್ರ ಪತ್ರದ ಮೂಲಕ ಕೋರಿದ್ದಾರೆ.
.




