Saturday, September 13, 2025
21.7 C
Bengaluru
Google search engine
LIVE
ಮನೆ#Exclusive Newsಪಂಚಮಸಾಲಿ ಮೀಸಲಾತಿಗೆ ಹಿಂದುಳಿದ ಜಾತಿ ವಿರೋಧ

ಪಂಚಮಸಾಲಿ ಮೀಸಲಾತಿಗೆ ಹಿಂದುಳಿದ ಜಾತಿ ವಿರೋಧ

 ಬೆಂಗಳೂರು: ಪಂಚಮಸಾಲಿ ಲಿಂಗಾಯತ ಸಮುದಾಯವನ್ನು ಪ್ರವರ್ಗ ‘2ಎ’ಗೆ ಸೇರ್ಪಡೆ ಮಾಡಬಾರದು. ಒಂದೊಮ್ಮೆ ಸೇರ್ಪಡೆ ಮಾಡಲು ಮುಂದಾದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಬುಧವಾರ ಕಾವೇರಿ ನಿವಾಸದ ಮುಂದೆ ಭೇಟಿ ಮಾಡಿದ ಒಕ್ಕೂಟದ ಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ. ಪ್ರಧಾನ ಕಾರ್ಯದರ್ಶಿ ಎಣ್ಣೆಗೆರೆ ಆ‌ರ್.ವೆಂಕಟರಾಮಯ್ಯ ನೇತೃತ್ವದ ನಿಯೋಗ, ‘ಪಂಚಮಸಾಲಿ ಸಮುದಾಯದ ಬೇಡಿಕೆಯನ್ನು ಯಾವುದೇ ಕಾರಣಕ್ಕೂ ಪರಿಗಣಿಸಬಾರದು. ಒಂದೊಮ್ಮೆ ಬೇಡಿಕೆ ಈಡೇರಿಸಲು ಮುಂದಾದರೆ ಒಕ್ಕೂಟದಿಂದ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ’ ಎಂದು ಸ್ಪಷ್ಟಪಡಿಸಿದರು. ಪಂಚಮಸಾಲಿ ಲಿಂಗಾಯತ ಸಮು ದಾಯವು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಮುಂದುವರೆದಿದೆ. ಡಾ| ನಾಗನಗೌಡ ಸಮಿತಿ, ಎಲ್.ಜಿ.ಹಾವನೂರು, ವೆಂಕಟಸ್ವಾಮಿ ಹಿಂದುಳಿದವರ್ಗಗಳ 2ನೇ ಆಯೋಗದ ವರದಿ, ನ್ಯಾ.ಓ. ಚನ್ನಪ್ಪರೆಡ್ಡಿ ವರದಿಗ ಳಲ್ಲಿ ಪಂಚಮಸಾಲಿ ಮುಂದುವರೆದ ಜನಾಂಗಎಂದಿವೆ ಎಂದು ವಿವರಿಸಿದರು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments