ಬೆಂಗಳೂರು: ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್ಗೆ ವಾಟಳ್ ನಾಗರಾಜ್ ಅವರು ಕರೆ ಕೊಟ್ಟಿದ್ದಾರೆ. ಆದರೆ ಮಾರ್ಚ್ 21ರಿಂದ 10ನೇ ತರಗತಿ ಪರೀಕ್ಷೆ ನಡೆಯುವುದರಿಂದ ಕರ್ನಾಟಕ ಬಂದ್ ದಿನಾಂಕವನ್ನು ಬದಲಾವಣೆ ಮಾಡುವ ಸಾಧ್ಯತೆ ಇದೆ.ಪಿಯುಸಿ ಪರೀಕ್ಷೆಗಳು ಇಂದು ಆರಂಭವಾಗಿ ಮಾರ್ಚ್ 20ಕ್ಕೆ ಕೊನೆಗೊಳ್ಳಲಿವೆ. ಇದರ ಬೆನ್ನಲ್ಲೇ ಮಾರ್ಚ್ 21 ರಿಂದ ಏಪ್ರಿಲ್ 4ರ ವರೆಗೆ 10ನೇ ತರಗತಿ ಪರೀಕ್ಷೆ ನಡೆಯುತ್ತವೆ. ಮಾರ್ಚ್ 22ಕ್ಕೆ ಕರ್ನಾಟಕ ಬಂದ್ ಘೋಷಣೆ ಮಾಡಿದ್ದರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಅಂದು ಸಮಸ್ಯೆ ಆಗುತ್ತದೆ. ಇಷ್ಟು ವರ್ಷ ಓದಿದ್ದನ್ನ ಒಂದೇ ದಿನದಲ್ಲೇ ವಿದ್ಯಾರ್ಥಿಗಳು ನಷ್ಟ ಮಾಡಿಕೊಳ್ಳಬಹುದು. ಹೀಗಾಗಿ ವಿದ್ಯಾರ್ಥಿಗಳಿಗೆ ತೊಂದರೆ ಆದರೆ ಬಂದ್ಗೆ ಬೆಂಬಲ ನೀಡಲ್ಲ ಎಂದು ಕೆಲ ಕನ್ನಡ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ.


