Monday, June 23, 2025
26.6 C
Bengaluru
Google search engine
LIVE
ಮನೆರಾಜಕೀಯಶ್ರೀಕಾಂತ್​ ಪೂಜಾರಿಯನ್ನ ಬಿಡುಗಡೆಗೊಳಿಸುವಂತೆ ಸರ್ಕಾರಕ್ಕೆ 48 ಗಂಟೆ ಗಡುವು : ಬಿ.ವೈ ವಿಜಯೇಂದ್ರ

ಶ್ರೀಕಾಂತ್​ ಪೂಜಾರಿಯನ್ನ ಬಿಡುಗಡೆಗೊಳಿಸುವಂತೆ ಸರ್ಕಾರಕ್ಕೆ 48 ಗಂಟೆ ಗಡುವು : ಬಿ.ವೈ ವಿಜಯೇಂದ್ರ

ಬೆಂಗಳೂರು :ರಾಮ ವಿರೋಧಿ ರಾಜ್ಯ ಸರ್ಕಾರದ ವಿರುದ್ಧ ಬೆಂಗಳುರಿನ ಫ್ರೀಢಂ ಪಾರ್ಕಿನಲ್ಲಿ ಇಂದು ನಡೆದ ಬಿಜೆಪಿ ಪ್ರತಿಭಟನೆ ನಡೆಸಿದರು. ಶ್ರೀನಗರದ ಲಾಲ್​ಚೌಕದಲ್ಲಿ ಕಾರ್ಯಕರ್ತರು ಮುರಳಿ ಮನೋಹರ್​​ ಜೋಷಿಯವರು ನೇತೃತ್ವದಲ್ಲಿ ತ್ರಿವರ್ಣ ಧ್ವಜ ಹಾರಿಸಿದ್ದೇವೆ. ಪೊಲೀಸರು ರಾಜ್ಯ ಸರ್ಕಾರದ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ ಎಂದು ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ,ವೈ ವಿಜಯೇಂದ್ರ ಅವರು ಎಚ್ಚರಿಸಿದರು.

ಬಿಜೆಪಿ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿಗಳಿಗೆ 48 ಗಂಟೆ ಗಡುವು ಕೊಡುತ್ತೇವೆ. ಶ್ರೀಕಾಂತ್​ ಪೂಜಾರಿಯವರನ್ನು ಬಿಡುಗಡೆ ಮಾಡದಿದ್ದರೆ, ಬಿಜೆಪಿ ಯುವಮೋರ್ಚಾ  ವತಿಯಿಂದ ಹುಬ್ಬಳ್ಳಿ ಪೊಲೀಸ್​ ಠಾಣೆಗೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯದಲ್ಲಿ ಮೊಘಲರ ಆಡಳಿತ, ತಾಲಿಬಾನ್​ ಆಡಳಿತ ಇದೆಯೇ ಎಂದು ಪ್ರತಿಯೊಬ್ಬರು ಮಾತನಾಡುತ್ತಿದ್ದಾರೆ. ಹಿಂದು ಹಕ್ಕುಗಳನ್ನು ತುಳಿಯುವ ಕೆಲಸ, ಹಿಂದೂ ವಿರೋಧಿ ನೀತಿ ನಮ್ಮದು. ನಿಮಗೆ ತಕ್ಕ ಪಾಠ ಕಲಿಸುತ್ತೆವೆ ಎಂದರು.

ಪಿಎಫ್​ಐ ವಿರುದ್ಧ ಇದ್ದ ಕೇಸ್​ಗಳನ್ನು ರದ್ದು ಮಾಡಿದ್ದ ಸರ್ಕಾರ ಕಾಂಗ್ರೆಸ್​​ನದು. ಡಿ.ಜೆ ಹಳ್ಳಿ, ಕೆಜೆ ಹಳ್ಳಿ ಕೇಸ್​ಗಳನ್ನು ಹಿಂದಕ್ಕೆ ಪಡೆಯಲು ಮುಂದಾಗಿದ್ದಾರೆ. ಕನ್ನಡ ವಿರೋಧಿ ಸರ್ಕಾರ ಇದು. ರೈತರ ವಿರುದ್ಧ ಕೇಸ್​ ಹಾಕುತ್ತಿದ್ದಾರೆ. ಹಿಂದೂ ರಾಮ ವಿರೋಧಿ ಕಾಂಗ್ರೆಸ್​​ ಸರ್ಕಾರಕ್ಕೆ ತಕ್ಕ ಉತ್ತರ ಕೋಡುತ್ತೇವೆ ಎಂದು ಎಚ್ಚರಿಸಿದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments