ಬೆಂಗಳೂರು :ರಾಮ ವಿರೋಧಿ ರಾಜ್ಯ ಸರ್ಕಾರದ ವಿರುದ್ಧ ಬೆಂಗಳುರಿನ ಫ್ರೀಢಂ ಪಾರ್ಕಿನಲ್ಲಿ ಇಂದು ನಡೆದ ಬಿಜೆಪಿ ಪ್ರತಿಭಟನೆ ನಡೆಸಿದರು. ಶ್ರೀನಗರದ ಲಾಲ್ಚೌಕದಲ್ಲಿ ಕಾರ್ಯಕರ್ತರು ಮುರಳಿ ಮನೋಹರ್ ಜೋಷಿಯವರು ನೇತೃತ್ವದಲ್ಲಿ ತ್ರಿವರ್ಣ ಧ್ವಜ ಹಾರಿಸಿದ್ದೇವೆ. ಪೊಲೀಸರು ರಾಜ್ಯ ಸರ್ಕಾರದ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ ಎಂದು ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ,ವೈ ವಿಜಯೇಂದ್ರ ಅವರು ಎಚ್ಚರಿಸಿದರು.

ಬಿಜೆಪಿ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿಗಳಿಗೆ 48 ಗಂಟೆ ಗಡುವು ಕೊಡುತ್ತೇವೆ. ಶ್ರೀಕಾಂತ್ ಪೂಜಾರಿಯವರನ್ನು ಬಿಡುಗಡೆ ಮಾಡದಿದ್ದರೆ, ಬಿಜೆಪಿ ಯುವಮೋರ್ಚಾ ವತಿಯಿಂದ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದರು.
ರಾಜ್ಯದಲ್ಲಿ ಮೊಘಲರ ಆಡಳಿತ, ತಾಲಿಬಾನ್ ಆಡಳಿತ ಇದೆಯೇ ಎಂದು ಪ್ರತಿಯೊಬ್ಬರು ಮಾತನಾಡುತ್ತಿದ್ದಾರೆ. ಹಿಂದು ಹಕ್ಕುಗಳನ್ನು ತುಳಿಯುವ ಕೆಲಸ, ಹಿಂದೂ ವಿರೋಧಿ ನೀತಿ ನಮ್ಮದು. ನಿಮಗೆ ತಕ್ಕ ಪಾಠ ಕಲಿಸುತ್ತೆವೆ ಎಂದರು.

ಪಿಎಫ್ಐ ವಿರುದ್ಧ ಇದ್ದ ಕೇಸ್ಗಳನ್ನು ರದ್ದು ಮಾಡಿದ್ದ ಸರ್ಕಾರ ಕಾಂಗ್ರೆಸ್ನದು. ಡಿ.ಜೆ ಹಳ್ಳಿ, ಕೆಜೆ ಹಳ್ಳಿ ಕೇಸ್ಗಳನ್ನು ಹಿಂದಕ್ಕೆ ಪಡೆಯಲು ಮುಂದಾಗಿದ್ದಾರೆ. ಕನ್ನಡ ವಿರೋಧಿ ಸರ್ಕಾರ ಇದು. ರೈತರ ವಿರುದ್ಧ ಕೇಸ್ ಹಾಕುತ್ತಿದ್ದಾರೆ. ಹಿಂದೂ ರಾಮ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಉತ್ತರ ಕೋಡುತ್ತೇವೆ ಎಂದು ಎಚ್ಚರಿಸಿದರು.