Thursday, November 20, 2025
27.5 C
Bengaluru
Google search engine
LIVE
ಮನೆ#Exclusive Newsಬೆಂಗಳೂರು ದಕ್ಷಿಣ-ಚನ್ನಪಟ್ಟಣ ಚಿತ್ರಣ ಶಿಘ್ರವೇ ಬದಲು : ಡಿಕೆ ಶಿವಕುಮಾರ್

ಬೆಂಗಳೂರು ದಕ್ಷಿಣ-ಚನ್ನಪಟ್ಟಣ ಚಿತ್ರಣ ಶಿಘ್ರವೇ ಬದಲು : ಡಿಕೆ ಶಿವಕುಮಾರ್

ಬೆಂಗಳೂರು:ಮುಂದಿನ ಮೂರು ವರ್ಷಗಳಲ್ಲಿ ಚನ್ನಪಟ್ಟಣ ಮತ್ತು ಬೆಂಗಳೂರು ದಕ್ಷಿಣ ಜಿಲ್ಲೆಯ ಚಹರೆಯೇ ಬದಲಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾನುವಾರ ಹೇಳಿದ್ದಾರೆ. 

ಚನ್ನಪಟ್ಟಣ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಗೆ ಕೃತಜ್ಞತೆ ಸಲ್ಲಿಸಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಾಲ್ವರು ಶಾಸಕರನ್ನು ಆಯ್ಕೆ ಮಾಡುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಿದೆ. ನಾವು ಅಭಿವೃದ್ಧಿಯೊಂದಿಗೆ ಚನ್ನಪಟ್ಟಣ ಮತ್ತು ಬೆಂಗಳೂರು ದಕ್ಷಿಣ ಜಿಲ್ಲೆಯ ಮುಖವನ್ನು ಬದಲಾಯಿಸುತ್ತೇವೆ.

“ನಾನು ಯಾರನ್ನೂ ಟೀಕಿಸಲು ಬಯಸುವುದಿಲ್ಲ. ಕ್ಷೇತ್ರದ ಜನತೆ ಜೆಡಿಎಸ್ ಹಾಗೂ ಬಿಜೆಪಿ ನಾಯಕರಾದ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ ಅವರಿಗೆ ತಕ್ಕ ಉತ್ತರ ನೀಡಿದ್ದಾರೆ. ನಿಮ್ಮ ಸಂದೇಶವು ದೇಶದಾದ್ಯಂತ ಪ್ರತಿಧ್ವನಿಸುತ್ತಿದೆ.

ಚುನಾವಣೆ ವೇಳೆ ಇಲ್ಲಿ ನಾನೇ ಅಭ್ಯರ್ಥಿ ಎಂದಿದ್ದೆ. ಈಗಲೂ ನಾನೇ ಅಭ್ಯರ್ಥಿ. ಮುಂದಿನ ಒಂದು ವಾರದಲ್ಲಿ ಮತ್ತೆ ಕ್ಷೇತ್ರಕ್ಕೆ ಬಂದು ಕೊಟ್ಟ ಮಾತು ಈಡೇರಿಸುವ ಕೆಲಸದ ಬಗ್ಗೆ ಪರಿಶೀಲಿಸುತ್ತೇನೆ. ಚುನಾವಣೆ ಸಮಯದಲ್ಲಿ ನಾನು ಕುಮಾರಸ್ವಾಮಿ ಅವರಿಗೆ ನೀವು ಶಾಸಕರಾಗಿ, ಮುಖ್ಯಮಂತ್ರಿಯಾಗಿ ಯಾವ ಸಾಧನೆ ಮಾಡಿದ್ದೀರಿ ಎಂದು ಪ್ರಶ್ನಿಸಿದ್ದೆ. ಯೋಗೇಶ್ವರ್ ಅನೇಕ ದೇವಾಲಯ ಕಟ್ಟಿಸಿದ್ದಾರೆ, ನೀವು ಯಾವ ದೇವಾಲಯ ಕಟ್ಟಿದ್ದೀರಿ, ಶಾಲೆಗಾಗಿ ನೀವು 2 ಎಕರೆ ಜಮೀನು ದಾನ ಮಾಡಿದ್ದೀರಾ ಎಂದು ಸವಾಲು ಹಾಕಿದ್ದೆ. ನನ್ನ ಪ್ರಶ್ನೆಗೆ ಅವರಿಂದ ಉತ್ತರವೇ ಬರಲಿಲ್ಲ ಎಂದರು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments