Top Newsಸುದ್ದಿ

ಗೂಗಲ್​ಪೇ, ಫೋನ್​ಪೇ ಮೂಲಕ ಆ್ಯಪ್​ ಮೂಲಕ ಲಂಚ ಪಡೆಯುತ್ತಿದವರು ಲೋಕಾಯುಕ್ತರ ಬಲೆಗೆ ಬಿದಿದ್ದಾರೆ

ಬೆಂಗಳೂರು: ನೆಲಮಂಗಲ ನಗರಸಭೆ ಕಚೇರಿ, ತಾಲ್ಲುಕು ಕಚೇರಿ ಮತ್ತು ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯ ಸಿಬ್ಬಂದಿ ಗೂಗಲ್​ಪೇ, ಫೋನ್​ಪೇನಂತಹ ಯುಪಿಐ ಆ್ಯಪ್​ಗಳ ಮೂಲಕ ಲಂಚ ಪಡೆಯುತ್ತಿದ್ದಾರೆ ಎಂಬುದರ ಪತ್ತೆಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ವಿಚಾರಣೆ ಆರಂಭಿಸಿದ್ದಾರೆ.

ನೆಲಮಂಗಲದ ಹಸಿರುವಳ್ಳಿ ಡೀಮ್ಸ್ ಅರಣ್ಯದಲ್ಲಿ ಬುಧವಾರ ನಡೆದ ವನಮಹೋತ್ಸವದಲ್ಲಿ ಭಾಗಿಯಾಗಿದ್ದ ಅವರು, ತಾಲ್ಲೂಕಿನ ವಿವಿಧ ಕಚೇರಿ, ವಿದ್ಯಾರ್ಥಿ ನಿಲಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿ 14 ಸ್ಥಳಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.

ನಗರಸಭೆ ಭೂ ದಾಖಲೆಗಳ ಕಚೇರಿ ಮತ್ತು ತಾಲ್ಲೂಕು ಕಚೇರಿಗಳಲ್ಲಿ ಲಂಚ ಪಡೆಯುತ್ತಿರುವ ಬಗ್ಗೆ ದೂರು ಇತ್ತು. ಇದನ್ನು ಪರಿಶೀಲಿಸುವ ಸಲುವಾಗಿ ಸಿಬ್ಬಂದಿಯ ಫೋನ್​ಗಳಲ್ಲಿ ಇದ್ದ ಯುಪಿಐ ಆ್ಯಪ್​ಗಳಲ್ಲಿ ಆಗಿರುವ ಹಣ ವರ್ಗಾವಣೆಗಲನ್ನು ಪರಿಶೀಲಿಸಲಾಯಿತು. ಹಲವು ಸಿಬ್ಬಂದಿಯ ತಿಂಗಳ ವೇತನಕ್ಕಿಂತ ಮೂರು ಪಟ್ಟು ಹೆಚ್ಚು ಮೊತ್ತ ಯುಪಿಐನಲ್ಲಿ ಅನುಮಾನಾಸ್ಪದವಾಗಿ ವರ್ಗಾವಣೆ ಆಗಿರುವುದು ಪತ್ತೆಯಾಯಿತು ಎಂದು ನ್ಯಾಯಮಾರ್ತಿ ವೀರಪ್ಪ ಮಾಹಿತಿ ನೀಡಿದರು.

ಈ ಸಂಬಂಧ ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆ ಎಲ್ಲ ಸಿಬ್ಬಂದಿಯ ಯುಪಿಐ ಆ್ಯಪ್​ಗಳಲ್ಲಿ ಆಗಿರುವ ಹನಕಾಸು ವರ್ಗಾವಣೆಯ ವಿವರ ಮತ್ತು ಆ ಹಣ ಎಲ್ಲಿಂದ ಬಂತು ಎಂಬುದರ ವಿವರಗಳನ್ನು ಒಳಗೊಂಡ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.

 

Comments (0)

Your email address will not be published. Required fields are marked *

Back to top button