Tuesday, June 24, 2025
26.6 C
Bengaluru
Google search engine
LIVE
ಮನೆ#Exclusive NewsTop Newsಗಣೇಶ ವಿಸರ್ಜನೆ ವೇಳೆ ಅವಘಡ; ತಂದೆ, ಮಗ ಸೇರಿ ಮೂವರು ಸಾವು

ಗಣೇಶ ವಿಸರ್ಜನೆ ವೇಳೆ ಅವಘಡ; ತಂದೆ, ಮಗ ಸೇರಿ ಮೂವರು ಸಾವು

ತುಮಕೂರು: ಗಣೇಶನ ವಿಸರ್ಜನೆ ಮಾಡುವಾಗ ನೀರಿನಲ್ಲಿ ಮುಳುಗಿ ತಂದೆ, ಮಗ ಹಾಗೂ ಓರ್ವ ಯುವಕ ಸಾವನ್ನಪ್ಪಿದ್ದಾರೆ.

ಈ ಘಟನೆ ತುರುವೇಕೆರೆ ತಾಲೂಕಿನ ಮಾರಸಂದ್ರ ಸಮೀಪದ ರಂಗನಹಟ್ಟಿ ಕೆರೆಯಲ್ಲಿ ನಡೆದಿದೆ.

ಗ್ರಾಮದ ರೇವಣ್ಣ (ತಂದೆ), ಇವರ ಮಗ ಶರತ್ ಹಾಗೂ ದಯಾನಂದ್ ಎನ್ನುವ ಯುವಕ ಮೃತಪಟ್ಟಿದ್ದಾರೆ. ಗ್ರಾಮದಲ್ಲಿ ಗಣೇಶ ಉತ್ಸವವನ್ನು ಸಂಭ್ರಮದಿಂದ ನೆರವೇರಿಸಲಾಗಿತ್ತು. ಬಳಿಕ ಮೆರವಣಿಗೆ ಮಾಡಿದ ನಂತರ ಗಣೇಶನನ್ನು ಕೆರೆಯ ನೀರಿನಲ್ಲಿ ವಿಸರ್ಜನೆ ಮಾಡಲಾಗುತ್ತಿತ್ತು. ಈ ವೇಳೆ ಕೆರೆಯ ನೀರಿನಲ್ಲಿ ಮುಳುಗಿ ತಂದೆ, ಮಗ ಹಾಗೂ ಯುವಕ ಸಾವನ್ನಪ್ಪಿದ್ದಾರೆ.

ದಂಡಿನಶಿವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಟಿ, ಪರಿಶೀಲನೆ ನಡೆಸುತ್ತಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments