ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್ಗೆ ಸಂಕಷ್ಟ ಎದುರಾಗಿದೆ. ಈ ಪ್ರಕರಣದಲ್ಲಿ ಅವರ ಬಂಧನಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿದೆ.
ಬಿಕ್ಲು ಶಿವ ಕೊಲೆ ಪ್ರಕರಣದ ತನಿಖೆಯನ್ನು ಕೇಂದ್ರೀಯ ಗುಪ್ತಚರ ಇಲಾಖೆ ಚುರುಕುಗೊಳಿಸಿದ್ದು, ಈಗಾಗಲೇ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಜಗದೀಶ್ನನ್ನು ಬಂಧಿಸಲಾಗಿದೆ. ಈಗ ಭೈರತಿ ಬಸವರಾಜ್ರನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕು ಎಂದು ಪ್ರಾಸಿಕ್ಯೂಷನ್ನ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಬಿ.ಎನ್. ಜಗದೀಶ್ ಹೈಕೋರ್ಟ್ನಲ್ಲಿ ವಾದ ಮಂಡಿಸಿದ್ದಾರೆ.
ಸಿಐಡಿ ತನಿಖೆಯಲ್ಲಿ ಈಗಾಗಲೇ ಹಲವು ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದ್ದು, ಈ ಸಾಕ್ಷ್ಯಗಳು ಭೈರತಿ ಬಸವರಾಜ್ ಅವರ ವಿರುದ್ಧದ ತನಿಖೆಯನ್ನು ಮತ್ತಷ್ಟು ಗಂಭೀರಗೊಳಿಸಿವೆ. ಈ ಹಿನ್ನೆಲೆಯಲ್ಲಿ, ಅವರನ್ನು ಬಂಧಿಸಿ ತನಿಖೆಗೊಳಪಡಿಸುವ ಅಗತ್ಯವಿದೆ ಎಂದು ಪ್ರಾಸಿಕ್ಯೂಷನ್ ಒತ್ತಾಯಿಸಿದೆ.
ಆದರೆ, ಈ ಅರ್ಜಿಗೆ ಬೈರತಿ ಬಸವರಾಜ್ ಅವರ ವಕೀಲರಾದ ಹಿರಿಯ ವಕೀಲ ಸಂದೇಶ್ ಚೌಟ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಳೆದ ಒಂದು ತಿಂಗಳಿಂದ ಸಿಐಡಿ ತನಿಖೆಗೆ ತಮ್ಮ ಕಕ್ಷಿದಾರರನ್ನು ಕರೆದಿಲ್ಲ ಎಂದು ಅವರು ವಾದಿಸಿದ್ದಾರೆ. ಈ ಹಿಂದೆ ತನಿಖೆಗೆ ಕರೆದಾಗಲೆಲ್ಲಾ ಬೈರತಿ ಬಸವರಾಜ್ ಸಂಪೂರ್ಣ ಸಹಕಾರ ನೀಡಿದ್ದಾರೆ ಎಂದು ಚೌಟ ತಿಳಿಸಿದ್ದಾರೆ.


