Wednesday, January 28, 2026
18.8 C
Bengaluru
Google search engine
LIVE
ಮನೆ#Exclusive NewsTop NewsPOP ಗಣೇಶ ತಯಾರಿಕೆ ಗೋಡೌನ್ ಮೇಲೆ BBMP ಅಧಿಕಾರಿಗಳ ದಾಳಿ

POP ಗಣೇಶ ತಯಾರಿಕೆ ಗೋಡೌನ್ ಮೇಲೆ BBMP ಅಧಿಕಾರಿಗಳ ದಾಳಿ

ಬೆಂಗಳೂರು:ಪಿಓಪಿ ಹಣೇಶ ತಯಾರಿಕೆ, ಮಾರಾಟಕ್ಕೆ ನಿಷೇಶವಿದೆ. ಹೀಗಿದ್ದರೂ ಬೆಂಗಳೂರಲ್ಲಿ ಪಿಓಪಿ ಗಣೇಶ ಮೂರ್ತಿಯನ್ನು ತಯಾರಿಕೆ ಮಾಡುತ್ತಿದ್ದಂತ ಗೋಡೌನ್ ಮೇಲೆ ಬಿಬಿಎಂಪಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆ ಬಳಿಕ ಗೋಡೌನ್​ನಲ್ಲಿದ್ದ 25 ಸಾವಿರ ಹೆಚ್ಚು ಗಣೇಶ ಮೂರ್ತಿಗಳನ್ನು ಸೀಜ್ ಮಾಡಿದ್ದಾರೆ.

ಈ ಕುರಿತಂತೆ ಬಿಬಿಎಂಪಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬೆಂಗಳೂರಿನ ರಾಜರಾಜೇಶ್ವರಿನಗರ ವಲಯದ ಯಶವಂತಪುರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂ.198 ಹೆಮ್ಮಿಗೆಪುರ ವ್ಯಾಪ್ತಿಯಲ್ಲಿ ಪಿ.ಓ.ಪಿ ಹಾಗೂ ರಾಸಾಯನಿಕ ವಸ್ತುಗಳನ್ನು ಬಳಸಿ ಮೂರ್ತಿಗಳನ್ನು ಸಂಗ್ರಹಿಸುವುದಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ರವರು ದೂರನ್ನು ಸಲ್ಲಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದರು.

ಸದರಿ ದೂರಿನ ಹಿನ್ನೆಲೆಯಲ್ಲಿ ವಲಯ ಆಯುಕ್ತರು ಹಾಗೂ ವಲಯ ಜಂಟಿ ಆಯುಕ್ತರು ರಾಜರಾಜೇಶ್ವರಿನಗರ ವಲಯ ರವರ ನಿರ್ದೇಶನದಂತೆ ಯಶವಂತಪುರ ವಿಭಾಗದ ವಾರ್ಡ್ ನಂ.198 ಹೆಮ್ಮಿಗೆಪುರ ವ್ಯಾಪ್ತಿಯ ಚೆಟ್ಟುಪಾಳ್ಯ ಮತ್ತು ಕೋಡಿಪಾಳ್ಯದ ವ್ಯಾಪ್ತಿಯಲ್ಲಿ ಕರ್ನಾಟಕ ಸರ್ಕಾರದಿಂದ ನಿಷೇಧಿಸಲಾದ ಪಿ.ಓ.ಪಿ ಹಾಗೂ ರಾಸಾಯನಿಕಗಳ ವಸ್ತುಗಳನ್ನು ಬಳಸಿ, ತಯಾರಿಸುತ್ತಿರುವ ವಿಗ್ರಹಗಳ ಮಾರಾಟ ಮಾಡುತ್ತಿರುವ ಗೋದಾಮಿಗೆ ಧೀಡಿ‌ ತಪಾಸಣೆ ಕೈಗೊಂಡು ಮೇಲಾಧಿಕಾರಿಗಳ ಆದೇಶದಂತೆ ಗೋದಾಮಿಗೆ ಬೀಗ ಮುದ್ರೆ ಮಾಡಿ ನೋಟಿಸ್ ಜಾರಿ ಮಾಡಲಾಗಿರುತ್ತದೆ ಎಂದು ತಿಳಿಸಿದೆ.

ಈ ತಪಾಸಣಾ ಸಮಯದಲ್ಲಿ ಆರೋಗ್ಯಾಧಿಕಾರಿ ರಾಜರಾಜೇಶ್ವರಿ ನಗರ, ಆರೋಗ್ಯ ವೈಧ್ಯಾಧಿಕಾರಿ ಕೆಂಗೇರಿ, ಉಪಪರಿಸರ ಅಧಿಕಾರಿ, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಪಾಲಿಕೆಯ ಸಿಬ್ಬಂದಿಗಳು ಈ ಕಾರ್ಯದಲ್ಲಿ ಪಾಲ್ಗೊಂಡಿದ್ದರು ಎಂದು ಹೇಳಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments