Thursday, November 20, 2025
19.9 C
Bengaluru
Google search engine
LIVE
ಮನೆಜಿಲ್ಲೆಬೆಳಗಾವಿ ವಕೀಲ ಸಂತೋಷ ಪಾಟೀಲ ಹತ್ಯೆ ಪ್ರಕರಣ; 8 ಆರೋಪಿಗಳ ಬಂಧನ

ಬೆಳಗಾವಿ ವಕೀಲ ಸಂತೋಷ ಪಾಟೀಲ ಹತ್ಯೆ ಪ್ರಕರಣ; 8 ಆರೋಪಿಗಳ ಬಂಧನ

ಬೆಳಗಾವಿ: ಜಮೀನಿನ ಆಸ್ತಿ ವಿವಾದ ಹಿನ್ನೆಲೆಯಲ್ಲಿ ವಕೀಲ ಸಂತೋಷ್​ ಪಾಟೀಲ ಹತ್ಯೆಯಾಗಿದ್ದು, 8 ಆರೋಪಿಗಳನ್ನು ಬಂಧಿಸಲಾಗಿದೆ. ಪರಾರಿಯಾದ ಇಬ್ಬರಿಗಾಗಿ ಬಲೆ ಬೀಸಲಾಗಿದೆ ಎಂದು ಬೆಳಗಾವಿ ಜಿಲ್ಲೆ ಎಸ್​​ಪಿ ಭೀಮಾಶಂಕರ್​ ಗುಳೇದ್​​ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಬಂಧಿತರು ರಾಯಬಾಗ ತಾಲೂಕಿನ ಬಸ್ತವಾಡದ ಶಿವನಗೌಡ ಬಸಗೌಡ ಪಾಟೀಲ, ಭರತ ಕೋಳಿ, ಬಿರನಾಳದ ಕಿರಣ ಕೆಂಪವಾಡೆ, ಗೋಕಾಕ್​ ತಾಲೂಕಿನ ಗುಜನಾಳದ ಉದಯ ಮುಶೆನ್ನವರ, ಬೈಲಹೊಂಗಲ ತಾಲೂಕಿನ ಚಂದೂರಿನ ಸುರೇಶ ನಂದಿ, ಹೊನ್ನಿಹಾಳದ ಮುಂಜುನಾಥ ತಳವಾರ ಬಂಧಿತರಾಗಿದ್ದಾರೆ . ರಾಯಬಾಗ ತಾಲೂಕಿನ ಅಳಗವಾಡಿಯ ಮಹಾವೀರ ಹಂಜೆ, ಹೊನ್ನಿಹಾಳದ ನಾಗರಾಜ ನಾಯಕ್​ ಪರಾರಿಯಾಗಿದ್ದು, ಬಲೆ ಬೀಸಲಾಗಿದೆ ಎಂದ್ರು.

ಏಪ್ರಿಲ್ 29ರಂದು ಸವಸುದ್ದಿಯಿಂದ ರಾಯಬಾಗದ ನ್ಯಾಯಾಲಯಕ್ಕೆ ಬರುತ್ತಿದ್ದ ಸಂತೋಷನನ್ನು ಕಾರಿನಲ್ಲಿ ಬಂದು ಅಡ್ಡಗಟ್ಟಿದ ಆರೋಪಿಗಳು ಕಿಡ್ನಾಪ್​ ಮಾಡಿದ್ದರು. ಬಳಿಕ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಗಣೇಶಗುಡಿಗೆ ಕರೆದೊಯ್ದು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿ ಸುಟ್ಟು ಹಾಕಿದ್ದರು.

ಪ್ರಕರಣವನ್ನು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾಗ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments