ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನೀಡಿರುವ ಭರವಸೆ ಮೇರೆಗೆ ಕಸದ ಲಾರಿ ಹಾಗೂ ಆಟೋ ಚಾಲಕರು ತಮ್ಮ ಮುಷ್ಕರವನ್ನು ಹಿಂಪಡೆದಿದ್ದಾರೆ. ಮನೆ ಮನೆಗಳಿಂದ ಕಸ ಸಂಗ್ರಹಿಸುವ ಹಾಗೂ ವಿಲೇವಾರಿ ಮಾಡುವ ವಾಹನಗಳ ಚಾಲಕರು ಮತ್ತು ಸಹಾಯಕರು ತಮ್ಮ ಸೇವೆಯನ್ನು ಬಿಬಿಎಂಪಿಯಲ್ಲಿ ಕಾಯಂ ವಿಲೀನ ಮಾಡಿಕೊಳ್ಳುವಂತೆ ಆಗ್ರಹಿಸಿ ಸೋಮವಾರದಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನೀಡಿರುವ ಭರವಸೆ ಮೇರೆಗೆ ಕಸದ ಲಾರಿ ಹಾಗೂ ಆಟೋ ಚಾಲಕರು ತಮ್ಮ ಮುಷ್ಕರವನ್ನು ಹಿಂಪಡೆದಿದ್ದಾರೆ. ಮನೆ ಮನೆಗಳಿಂದ ಕಸ ಸಂಗ್ರಹಿಸುವ ಹಾಗೂ ವಿಲೇವಾರಿ ಮಾಡುವ ವಾಹನಗಳ ಚಾಲಕರು ಮತ್ತು ಸಹಾಯಕರು ತಮ್ಮ ಸೇವೆಯನ್ನು ಬಿಬಿಎಂಪಿಯಲ್ಲಿ ಕಾಯಂ ವಿಲೀನ ಮಾಡಿಕೊಳ್ಳುವಂತೆ ಆಗ್ರಹಿಸಿ ಸೋಮವಾರದಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.
ಪಿಡಿ ಸಾಲಪ್ಪನವರ ವರದಿ ಜಾರಿಗೊಳಿಸಬೇಕು. 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಮತ್ತು ರಾಹುಲ್ ಗಾಂಧಿಯವರು ನೀಡಿದ ಭರವಸೆಯಂತೆ ಚಾಲಕರು, ಸಹಾಯಕರು, ಲೋಡರ್ಸ್ಗಳ ಸೇವೆಯನ್ನು ಕಾಯಂ ವಿಲೀನಗೊಳಿಸಬೇಕು ಎಂದು ಹೇಳಿದ್ದರು.
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರದಿಂದ ಕರ್ನಾಟಕ ಸಂರಕ್ಷಣಾ ಟ್ರೇಡ್ ಯೂನಿಯನ್ ಸಂಘಟನೆಯಡಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದರು. ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದ ಹೋರಾಟದಿಂದ ನಗರದಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ಎದುರಾಗಿತ್ತು. ಸಾವಿರ ಟನ್ಗೂ ಹೆಚ್ಚಿನ ಕಸ ವಿಲೇವಾರಿಯಾಗಿರಲಿಲ್ಲ. ಬುಧವಾರದಿಂದ ಕಸ ಸಂಗ್ರಹ ವಿಲೇವಾರಿ ಕೆಲಸ ಆರಂಭಿಸುವುದಾಗಿ ಮುಖಂಡರು ಹೇಳಿದ್ದಾರೆ.
ನಿನ್ನೆ ಸಂಜೆ ವೇಳೆ ಪೊಲೀಸ್ ಅಧಿಕಾರಿಗಳ ಮೂಲಕ ಪುನಃ ದೂರವಾಣಿ ಕರೆ ಮಾಡಿದ ಡಿಕೆ ಶಿವಕುಮಾರ್ ಅವರು ಸ್ಪಷ್ಟ ಭರವಸೆ ನೀಡಿದ ಬಳಿಕ ಧರಣಿಯನ್ನು ಹಿಂಪಡೆದಿದ್ದಾರೆ. ನಮ್ಮ ಸರ್ಕಾರ ಪೌರಾಡಳಿತ ಇಲಾಖೆ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ಸಾಕಷ್ಟು ಪರಿಹಾರಗಳನ್ನು ನೀಡಿದೆ. ವಿಧಾನಮಂಡಲ ಅಧಿವೇಶನದ ಬಳಿಕ ನಿಮ್ಮಲ್ಲಿರುವ ಎಲ್ಲಾ ಸಂಘಟನೆಗಳೊಂದಿಗೆ ಚರ್ಚೆ ನಡೆಸುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
55 ವರ್ಷ ತುಂಬಿದ ಪೌರಕಾರ್ಮಿಕರ ಸೇವೆಯನ್ನು ಅನುಭವದ ಆಧಾರದಲ್ಲಿ ಕಾಯಂ ವಿಲೀನ ಮಾಡಬೇಕು. 500 ಜನರಿಗೆ ಒಬ್ಬ ಪೌರಕಾರ್ಮಿಕರಂತೆ 32 ಸಾವಿರ ಪೌರಕಾರ್ಮಿಕರನ್ನು ನೇರ ಪಾವತಿಯಡಿ ಹೊಸದಾಗಿ ಕೆಲಸಕ್ಕೆ ನೇಮಿಸಬೇಕು ಎನ್ನುವ ಬೇಡಿಕೆಯೂ ಮುಂದಿದೆ.


