Tuesday, January 27, 2026
26.9 C
Bengaluru
Google search engine
LIVE
ಮನೆ#Exclusive NewsTop Newsಹಾಸನದಲ್ಲಿ ಬಸ್ಸು ತಡೆದು ಪುಡಿ ರೌಡಿಯ ಕಾಟ

ಹಾಸನದಲ್ಲಿ ಬಸ್ಸು ತಡೆದು ಪುಡಿ ರೌಡಿಯ ಕಾಟ

ಹಾಸನ: ಬೆಂಗಳೂರು- ಮಂಗಳೂರು ಖಾಸಗಿ ಬಸ್ ತಡೆದು ಪುಡಿ ರೌಡಿ ಅಟ್ಟಹಾಸ ಮೆರೆದು ಲಾಂಗ್‌ನಿಂದ ಹಲ್ಲೆಗೆ ಯತ್ನಿಸಿದ ಘಟನೆ ಹಾಸನ ಹೊರವಲಯದ ಬೈಪಾಸ್‌ ರಸ್ತೆಯಲ್ಲಿ ನಡೆದಿದೆ.

ಬುಧವಾರ ನಸುಕಿನ ಜಾವ 2 ಗಂಟೆಗೆ ಬೈಪಾಸ್‌ ರಸ್ತೆಯ ದೇವರಾಯಪಟ್ಟಣದ ಬಳಿ ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್‌ ಸಂಚರಿಸುತ್ತಿತ್ತು.

ಈ ಸಂದರ್ಭದಲ್ಲಿ ಕೆಎ 51 ಎಂವಿ 8912 ನಂಬರ್‌ನ ಸ್ವಿಫ್ಟ್ ಕಾರನ್ನು ಬಸ್ಸಿನ ಮುಂದೆ ಅಡ್ಡ ಹಾಕಿ ನಿಲ್ಲಿಸಿದ್ದಾನೆ. ಕಾರಿನಿಂದ ಇಳಿದ ಬಳಿಕ ಗಲಾಟೆ ಮಾಡಿ ಬಸ್ಸಿನ ಗ್ಲಾಸನ್ನು ಒಡೆದು ಹಾಕಿದ್ದಾನೆ.

ಪುಡಿ ರೌಡಿಯ ಹುಚ್ಚಾಟ ಬಸ್ಸಿನಲ್ಲಿದ್ದವರ ಮೊಬೈಲಿನಲ್ಲಿ ಸೆರೆಯಾಗಿದೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿದ್ದಂತೆ ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಬಸ್ಸಿಗೆ ಹೀಗೆ ಆದರೆ ಇನ್ನೂ ಕಾರು, ಬೈಕಿನಂತ ವಾಹನದಲ್ಲಿ ‌ಪ್ರಯಾಣ ಮಾಡುವವರು ಏನು ಮಾಡಬೇಕು ಎಂದು ನೆಟ್ಟಿಗರು ಪೊಲೀಸರನ್ನು ಪ್ರಶ್ನಿಸಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments