Tuesday, June 24, 2025
25.1 C
Bengaluru
Google search engine
LIVE
ಮನೆ#Exclusive NewsTop Newsಮುಡಾ ಕೇಸ್: ಕೊನೆಗೂ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು

ಮುಡಾ ಕೇಸ್: ಕೊನೆಗೂ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶಿಸಿದೆ. ಕೋರ್ಟ್​ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಆದೇಶದಂತೆ ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ SP ಉದೇಶ್ ನೇತೃತ್ವದಲ್ಲಿ ಎಫ್ಐಆರ್ ದಾಖಲಾಗಿದೆ. ಸಿಆರ್‌ಪಿಸಿ  ಅಡಿಯಲ್ಲಿ ಎಫ್​ಐಆರ್​ ದಾಖಲಿಸಿ ಎಂದು ಕೋರ್ಟ್​ ಆದೇಶ ನೀಡಿತ್ತು. ಅದೇ ಕಾಯ್ದೆಯಡಿ  ಇದೀಗ ಸಿದ್ದರಾಮಯ್ಯ ವಿರುದ್ಧ ಸಿಆರ್​ಪಿಸಿ 156(3)ರ ಹಲವು ಸೆಕ್ಷನ್​​ ಅಡಿಯಲ್ಲಿ ಎಫ್​ಐಆರ್ ದಾಖಲಾಗಿದೆ.

 

ಯಾರ ವಿರುದ್ಧ ಎಫ್‌ಐಆರ್‌?
* ಸಿದ್ದರಾಮಯ್ಯ, ಮುಖ್ಯಮಂತ್ರಿ (A1)
* ಪಾರ್ವತಿ ಬಿಎಂ, ಸಿದ್ದರಾಮಯ್ಯ ಪತ್ನಿ(A2)
* ಮಲ್ಲಿಕಾರ್ಜುನ ಸ್ವಾಮಿ, ಸಿದ್ದರಾಮಯ್ಯ, ಬಾಮೈದ(A3)
* ದೇವರಾಜು, ಮಾರಾಟಗಾರ, ನಕಲಿ ಭೂ ಮಾಲೀಕ (A4)

ಯಾವೆಲ್ಲ ಕಾಯ್ದೆ, ಐಪಿಸಿ ಸೆಕ್ಷನ್‌ ಅಡಿ ಎಫ್‌ಐಆರ್?
– ಭ್ರಷ್ಟಾಚಾರ ತಡೆ ಕಾಯ್ದೆ 1988
– ಬೇನಾಮಿ ಆಸ್ತಿ ವಹಿವಾಟು ಕಾಯ್ದೆ 1988
– ಕರ್ನಾಟಕ ಭೂಮಿ ಕಬಳಿಕೆ ನಿಷೇಧ ಕಾಯ್ದೆ 2011ರ ಅನ್ವಯ ಪ್ರಕರಣ ದಾಖಲು
– ಸೆಕ್ಷನ್ 120 ಬಿ ಕ್ರಿಮಿನಲ್ ಪಿತೂರಿ
– ಸೆಕ್ಷನ್ 166 ಸಾರ್ವಜನಿಕ ಸೇವಕ ಕಾನೂನು ಉಲ್ಲಂಘನೆ ಮಾಡುವುದು
– ಸೆಕ್ಷನ್ 403 ಆಸ್ತಿಯ ದುರ್ಬಳಕೆ
– ಸೆಕ್ಷನ್ 406 ನಂಬಿಕೆಯ ಉಲ್ಲಂಘನೆ
– ಸೆಕ್ಷನ್ 420 ವಂಚನೆ
– ಸೆಕ್ಷನ್ 426 ದುಷ್ಕೃತ್ಯವೆಸಗುವುದು
– ಸೆಕ್ಷನ್ 465 ಫೋರ್ಜರಿ
– ಸೆಕ್ಷನ್ 468 ವಂಚನೆ ಉದ್ದೇಶಕ್ಕಾಗಿ ದಾಖಲೆಗಳ ಫೋರ್ಜರಿ
– ಸೆಕ್ಷನ್ 340 ಅಕ್ರಮ ಬಂಧನ
– ಸೆಕ್ಷನ್ 351 ಇತರರಿಗೆ ಹಾನಿಯನ್ನುಂಟು ಮಾಡುವುದು

ದೂರುದಾರ, ಆರ್​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ದೂರಿನ ಮೇರೆಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್​ ದಾಖಲಿಸುವಂತೆ ನ್ಯಾಯಾಲಯ ಸೂಚಿಸಿತ್ತು. ನ್ಯಾಯಾಲಯ ಸೂಚಿಸಿರುವ ಐಪಿಸಿ ಸೆಕ್ಷನ್ ಭ್ರಷ್ಟಾಚಾರ ತಡೆ ಕಾಯ್ದೆ, ಬೇನಾಮಿ ಆಸ್ತಿ ವಹಿವಾಟು ಕಾಯ್ದೆ, ಭೂ ಕಬಳಿಕೆ ನಿರ್ಬಂಧ ಕಾಯ್ದೆಯಡಿ ಲೋಕಾಯುಕ್ತ ಎಫ್​ಐಆರ್ ದಾಖಲಿಸಿದೆ. ಸಿಎಂ ಸಿದ್ದರಾಮಯ್ಯ A 1 ಆರೋಪಿಯಾಗಿದ್ದರೆ, ಪತ್ನಿ ಪಾರ್ವತಿ A 2 ಆರೋಪಿಯಾಗಿದ್ದಾರೆ. ಇನ್ನು ಬಾಮೈದಾ ಮಲ್ಲಿಕಾರ್ಜುನ A 3, ಭೂಮಾಲೀಕ ದೇವರಾಜು ಎ4 ಹಾಗೂ ಎ5 ಇತರರು ಎಂದು ಎಫ್​ಐಆರ್​ನಲ್ಲಿ ದಾಖಲಿಸಲಾಗಿದೆ. ಇನ್ನು ಸಿಎಂ ಸಿದ್ದರಾಮಯ್ಯ ವಿರುದ್ಧದ ಎಫ್ಐಆರ್ ನಂಬರ್ 11/2024 ಆಗಿದೆ.

ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ಪ್ರತಿ ಗುರುವಾರ ಲೋಕಾಯುಕ್ತ ಎಸ್​ಪಿ ಉದೇಶ್ ಅವರ ಪೆಡೆದ್ದರು. ಬಳಿಕ ಲೋಕಾಯುಕ್ತ ಪ್ರಧಾನ ಕಚೇರಿಗೆ ಭೇಟಿ ನೀಡಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. ಕೊನೆಗೆ ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬೀಕರ್ ಮಾರ್ಗದರ್ಶನದಲ್ಲಿ ಮೈಸೂರು ಲೋಕಾಯುಕ್ತ ಎಸ್​ಪಿ ಉದೇಶ್​ ಅವರು ಖುದ್ದು ತಾವೇ ಮುಂದೆ ನಿಂತು ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲಿಸಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments