Thursday, August 21, 2025
26.4 C
Bengaluru
Google search engine
LIVE
ಮನೆ#Exclusive NewsTop Newsಇಂದು ಟಿಪ್ಪು ಜಯಂತಿ ಹಿನ್ನೆಲೆ : ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ!

ಇಂದು ಟಿಪ್ಪು ಜಯಂತಿ ಹಿನ್ನೆಲೆ : ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ!

ಮಂಡ್ಯ : ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಪರಶುರಾಮ್ ಸತ್ತೀಗೇರಿ ಆದೇಶ ಹೊರಡಿಸಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಶ್ರೀರಂಗಪಟ್ಟಣ ತಹಶೀಲ್ದಾರ್ ಪರಶುರಾಮ್ ಸತ್ತೀಗೇರಿ ಅವರು ಆದೇಶ ಹೊರಡಿಸಿದ್ದಾರೆ.

ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 6 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಇಂದು  ಶ್ರೀರಂಗಪಟ್ಟಣದಲ್ಲಿ ಯಾವುದೇ ಮೆರವಣಿಗೆ ಮಾಡುವಂತಿಲ್ಲ, ಗುಂಪೂಗೂಡುವಂತಿಲ್ಲ. ಪಟಾಕಿ ಸಿಡಿಸಿ ಸಂಭ್ರಮಾಚರಣೆ, ಮಾರಾಕಾಸ್ತ್ರಗಳನ್ನು ಒಯ್ಯುವಂತಿಲ್ಲ ಎಂದು ತಿಳಿಸಲಾಗಿದೆ.

ಟಿಪ್ಪು ವಕ್ಫ್​ ಎಸ್ಟೇಟ್​, ಟಿಪ್ಪು ಜಯಂತಿ ಆಚರಿಸಲು ಮುಂದಾಗಿದ್ದು, ಮೈಸೂರು ಸೇರಿದಂತೆ ಹಲವೆಡೆಯಿಂದ ಜನ ಆಗಮಿಸುವ ಸಾಧ್ಯತೆ ಇದೆ. ಮುಂಜಾಗ್ರತಾ ಕ್ರಮವಾಗಿ ಇಂದು ಬೆಳಗ್ಗೆ 6 ರಿಂದಲೇ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ರಾತ್ರಿ 11 ಗಂಟೆವರೆಗೆ ಇರಲಿದೆ. ಯಾವುದೇ ಮೆರವಣಿಗೆ, ಪ್ರತಿಭಟನೆ ನಡೆಸದಂತೆ ನಿರ್ಬಂಧ ವಿಧಿಸಲಾಗಿದೆ. ಜೊತೆಗೆ, ಯಾವುದೇ ಘೋಷಣೆ ಕೂಗದಂತೆ ಆದೇಶ ಹೊರಡಿಸಿತ್ತು. ಇನ್ನು ಟಿಪ್ಪು ಮಡಿದ ಸ್ಥಳ ,ಗುಂಬಸ್ ,ಜಾಮೀಯಾ ಮಸೀದಿ ಸೇರಿ ಪಟ್ಟಣದ ಪ್ರಮುಖ ವೃತ್ತದಲ್ಲಿ ಪೊಲೀಸರ ನಿಯೋಜನೆ ಮಾಡಲಾಗಿದೆ.

ಇನ್ನು ಸರಳವಾಗಿ ಟಿಪ್ಪು ಜಯಂತಿ ಆಚರಣೆ ಮಾಡುವಂತೆ ಮುಸ್ಲಿಂ ಮುಖಂಡರಿಗೆ ತಿಳಿಸಿದ್ದು, ಶಾಸಕ ತನ್ವೀರ್ ಸೇಠ್ ನೇತೃತ್ವದಲ್ಲಿ ಗುಂಬಸ್ ನಲ್ಲಿರುವ ಟಿಪ್ಪು ಸಮಾಧಿಗೆ ಪುಷ್ಟ ನಮನ‌ ಸಲ್ಲಿಸಲಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments