Wednesday, April 30, 2025
30.3 C
Bengaluru
LIVE
ಮನೆ#Exclusive NewsTop Newsಶಾಸಕ ಸತೀಶ್ ಸೈಲ್​ಗೆ ಬಿಗ್ ರಿಲೀಫ್: ಹೈಕೋರ್ಟ್​ನಿಂದ ಜಾಮೀನು ಮಂಜೂರು

ಶಾಸಕ ಸತೀಶ್ ಸೈಲ್​ಗೆ ಬಿಗ್ ರಿಲೀಫ್: ಹೈಕೋರ್ಟ್​ನಿಂದ ಜಾಮೀನು ಮಂಜೂರು

ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಕಾರವಾರದ ಕಾಂಗ್ರೆಸ್​ ಶಾಸಕ ಸತೀಶ್​ ಸೈಲ್​ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಸೆಷನ್ಸ್ ಕೋರ್ಟ್​ ಆದೇಶವನ್ನು ಅಮಾನತು ಮಾಡಿರುವ ಹೈಕೋರ್ಟ್​ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ನೇತೃತ್ವದ ಪೀಠ, ಸತೀಶ್​ ಸೈಲ್​ ಸೇರಿದಂತೆ ಪ್ರಕರಣದ ಸೇರಿದಂತೆ ಎಲ್ಲಾ ಅಪರಾಧಿಗಳಿಗೂ ಜಾಮೀನು ನೀಡಿದೆ.

ಪ್ರಕರಣದ ಅಪರಾಧಿಗಳಿಗೆ ಜಾಮೀನು ಮಂಜೂರು ಮಾಡಿರುವ ಹೈಕೋರ್ಟ್​ ಪೀಠ, ದಂಡದ ಮೊತ್ತ 44 ಕೋಟಿಯಲ್ಲಿ ಶೇಕಡಾ 25ರಷ್ಟು ಮೊತ್ತವನ್ನು ಠೇವಣಿ ಇಡುವಂತೆ ಷರತ್ತು ವಿಧಿಸಿದೆ. 6 ವಾರಗಳಲ್ಲಿ ದಂಡದ ಮೊತ್ತ 44 ಕೋಟಿಯಲ್ಲಿ 11 ಕೋಟಿ ಠೇವಣಿ ಇಡುವಂತೆ ಹೈಕೋರ್ಟ್​ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ನೇತೃತ್ವದ ಪೀಠ ಸೂಚನೆ ನೀಡಿದೆ. ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದ ಆರೋಪಿಗಳು ನಾಳೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments