Tuesday, January 27, 2026
24 C
Bengaluru
Google search engine
LIVE
ಮನೆರಾಜಕೀಯಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಸರ್ಕಾರ ಫಿಕ್ಸ್?

ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಸರ್ಕಾರ ಫಿಕ್ಸ್?

ಮುಡಾ ಸೈಟ್ ಹಂಚಿಕೆ ಅಕ್ರಮ ಹಾಗೂ ವಾಲ್ಮೀಕಿ ನಿಗಮದ ಹಗರಣದಿಂದಾಗಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಪತನದ ಭೀತಿ ಆರಂಭವಾಗಿದೆ. ಸರ್ಕಾರದಲ್ಲಿನ ಹಗರಣಗಳಿಂದ ಕಾಂಗ್ರೆಸ್ ವರಿಷ್ಠರಿಗೂ ಮುಜುಗರ ತಂದಿದೆ. ಇದರ ಜೊತೆಗೆ ಸಿದ್ದರಾಮಯ್ಯರನ್ನ ಕುರ್ಚಿಯಿಂದ ಬೀಳಿಸಲು ಇನ್ನೊಂದು ಬಣ ತುದಿಗಾಲಲ್ಲಿ ಕೈ ಹಾಕಿ ನಿಂತಿದೆ. ಇದರ ನಡುವೆ ಕಾಂಗ್ರೆಸ್​​ಗೆ ಆಘಾತ ಕೊಡೋ ಸುದ್ದಿ ಕೊಟ್ಟಿದ್ದಾರೆ ಮಾಜಿ ಸಿಎಂ, ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ.

ಮುಡಾ ಹಗರಣ ವಿರೋಧಿಸಿ ಬಿಜೆಪಿ-ಜೆಡಿಎಸ್ ಮೈಸೂರಿಗೆ ಬೃಹತ್ ಪಾದಯಾತ್ರೆ ನಡೆಸುತ್ತಿದೆ. ಈ ಪಾದಯಾತ್ರೆ ವೇಳೆ ಮಾತನಾಡಿರುವ ಹೆಚ್​ಡಿಕೆ, ಹೊಸ ಸರ್ಕಾರ ರಚನೆಯ ಹೊಸ ಗುಟ್ಟು ಬಿಟ್ಟುಕೊಟ್ಟಿದ್ದಾರೆ. ರಾಜ್ಯದಲ್ಲಿ ಮತ್ತೆ ಎನ್​ಡಿಎ ಸರ್ಕಾರವನ್ನು ತರಲು ಒಟ್ಟಾಗಿ ಕೆಲಸ ಮಾಡ್ತಿದ್ದೀವಿ ಎಂದಿದ್ದಾರೆ. ಮುಂದಿನ ದಿನಗಳಲ್ಲಿ ಸಮ್ಮಿಶ್ರ ಸರ್ಕಾರವನ್ನು ಮರಳು ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದಿದ್ದಾರೆ. ಅಲ್ದೇ ಸಿಎಂ ಯಾರು ಆಗ್ಬೇಕು ಅನ್ನೋದಕ್ಕಿಂತ ಕಾರ್ಯಕರ್ತರು ಮೊದಲು ಒಟ್ಟಿಗೆ ಕೆಲಸ ಮಾಡಿ ಅಂತಲೂ ಕರೆ ನೀಡಿದ್ದಾರೆ.

ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿಯವರ ಈ ಹೇಳಿಕೆ ರಾಜಕೀಯ ಪಡಸಾಲೆಯಲ್ಲಿ ಭಾರೀ ಕುತೂಹಲ ಮೂಡಿಸಿದೆ. ಒಂದು ಕಡೆ ಸಿದ್ದರಾಮಯ್ಯರನ್ನ ಕೆಳಗಿಳಿಸಬೇಕು ಅನ್ನೋ ಹೊತ್ತಿಲ್ಲೇ ತೂರಿಬಂದ ಈ ಹೇಳಿಕೆ, ಕಾಂಗ್ರೆಸ್​​ಗೆ ಶಾಕ್ ಕೊಟ್ಟಿರೋದಂತೂ ಸತ್ಯ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments