Wednesday, January 28, 2026
17 C
Bengaluru
Google search engine
LIVE
ಮನೆಜಿಲ್ಲೆಕೊಲೆ ಯತ್ನ ಆರೋಪ, ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಂಧನ

ಕೊಲೆ ಯತ್ನ ಆರೋಪ, ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಂಧನ

ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ನನ್ನು​​ ಕೊಲೆ ಯತ್ನ ಆರೋಪದಲ್ಲಿ ಪೊಲೀಸರು ತಡರಾತ್ರಿ ಬಂಧಿಸಿದ್ಧಾರೆ.

ಕೊಲೆಯತ್ನ ಆರೋಪದಡಿ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗ್ರಾಮದ ಬಳಿ ಪೊಲೀಸರು ಕಾರ್ಯಾಚರಣೆ ನಡೆಸಿ ಮಣಿಕಂಠ ರಾಠೋಡ್​ ಅವರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ..ಜೇವರ್ಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ಇರುವ ನಾಟಿ ಔಷಧಿ ವೈದ್ಯ ರಶೀದ್ ಮುತ್ಯಾ ಬಂಧನಕ್ಕೆ ಮಣಿಕಂಠ ರಾಠೋಡ್ ಆಗ್ರಹಿಸಿದ್ದರು.

ಮಣಿಕಂಠ ರಾಠೋಡ್, ಬೆಂಬಲಿಗರೊಂದಿಗೆ ಗ್ರಾಮಕ್ಕೆ ತೆರಳಿ ದೊಡ್ಡ ಹೈಡ್ರಾಮಾ ಕ್ರಿಯೇಟ್ ಮಾಡಿದ್ದರು. ಈ ವೇಳೆ ರಶೀದ್ ಮತ್ಯಾ ಕಾರು ಚಾಲಕನ ತಲೆಗೆ ಕಲ್ಲೇಟು ಬಿದ್ದಿತ್ತು. ರಶೀದ್ ಮುತ್ಯಾ ಚಾಲಕನ ದೂರಿನ ಮೇರೆಗೆ ಬಂಧನವಾಗಿದೆ. ಮಣಿಕಂಠ್ ರಾಠೋಡ್ ವಿರುದ್ಧ ಕೊಲೆಯತ್ನ ಆರೋಪದಡಿ ದೂರು ದಾಖಲಾಗಿದೆ. ನೆಲೋಗಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments