Monday, June 23, 2025
26.6 C
Bengaluru
Google search engine
LIVE
ಮನೆ#Exclusive NewsTop Newsಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆ ತೊರೆಯಲು ಮುಂದಾದ ಶಾಸಕ ಸುನಿಲ್ ಕುಮಾರ್

ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆ ತೊರೆಯಲು ಮುಂದಾದ ಶಾಸಕ ಸುನಿಲ್ ಕುಮಾರ್

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಬಣ ಬಡಿದಾಟ ಜೋರಾಗಿದೆ. ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್​ ಬಣಗಳ ನಡುವಿನ ಆರೋಪ ಪ್ರತ್ಯಾರೋಪ ತಾರಕಕ್ಕೇರಿದೆ. ಇದರ ಮಧ್ಯ ಪಕ್ಷದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದೆ. ಕೇಸರಿ  ಬಣದಲ್ಲಿ ಬಡಿದಾಟಕ್ಕೆ ಮೇಜರ್ ಹೊಸ ಟ್ವಿಸ್ಟ್ ಸಿಕ್ಕಿದ್ದು, ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆ ತೊರೆಯಲು ಮುಂದಾಗಿದೆ. ಈ ಬಗ್ಗೆ ಸ್ವತಃ ಅವರೇ ತಮ್ಮನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮುಕ್ತಗೊಳಿಸುವಂತೆ ಹೈಕಮಾಂಡ್​ಗೆ ಮೌಖಿಕವಾಗಿ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ನಳಿನ್ ಕುಮಾರ್ ಕಟೀಲ್ ಅವರು ರಾಜ್ಯಾಧ್ಯಕ್ಷ ಹುದ್ದೆಯಿಂದ ಇಳಿದ ಬಳಿಕ ಹೈಕಮಾಂಡ್​ ವಿಜಯೇಂದ್ರ ಅವರಿಗೆ ಪಟ್ಟ ಕಟ್ಟಿದ್ದು. ಬಳಿಕ ವಿಜಯೇಂದ್ರ ತಮ್ಮದೇ ಒಂದು ತಂಡ ಕಟ್ಟಿದ್ದಾರೆ. ತಮ್ಮ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಯುವ ನಾಯಕರುಗಳಿಗೆ ಆಯಾ ಕಟ್ಟಿನ ಹುದ್ದೆ ನೀಡಿದ್ದಾರೆ. ಅದರಂತೆ ಸುನಿಲ್​ ಕುಮಾರ್​ಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಿದ್ದರು. ಆದ್ರೆ, ಇದೀಗ ಅದ್ಯಾಕೋ ಸುನಿಲ್ ಕುಮಾರ್ ಅವರು ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ತೊರೆಯಲು ಮುಂದಾಗಿದೆ ಎನ್ನಲಾಗಿದೆ.

ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ನಿರ್ವಾಹಿಸುತ್ತಿರುವ ಸುನಿಲ್ ಕುಮಾರ್ ​, ವಿಜಯೇಂದ್ರ ತಂಡದಿಂದ ಹೊರಬರಲು ಪ್ರಯತ್ನಿಸುತ್ತಿದ್ದಾರೆ. ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಜೊತೆ ಸುನಿಲ್​ ಕುಮಾರ್ ಯಾವುದೇ ವಿರಸವು ಇಲ್ಲ. ಸಮರಸವು ಇಲ್ಲ. ಆದ್ರೆ, ಅವರಿಂದ ಅಂತರ ಕಾಯ್ದುಕೊಂಡಿದ್ದಾರೆ. ವಿಜಯೇಂದ್ರ ಜೊತೆ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿಲ್ಲ. ಈಗ ರಾಜ್ಯಾಧ್ಯಕ್ಷರ ಬದಲಾವಣೆ ಕೂಗು ಬೆನ್ನೆಲ್ಲೇ ಸುನಿಲ್ ಕುಮಾರ್, ಹುದ್ದೆಯಿಂದ ಮುಕ್ತಿಗೊಳಿಸುವಂತೆ ಹೈಕಮಾಂಡ್​ಗೆ ಈ ಮನವಿ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ. ಆದ್ರೆ, ಹೈಕಮಾಂಡ್ , ಸುನಿಲ್ ಕುಮಾರ್ ಅವರ ಮನವಿ ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರಕ್ಕೆ ಬಂದಿಲ್ಲ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments