ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ 2016ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಲೋಕಾಯುಕ್ತ ವರದಿಯನ್ನು ಹತ್ತಿಕ್ಕಿರುವ ಕುರಿತು ಜಂಟಿ ಸಂಸದೀಯ ಸಮಿತಿ(ಜೆಪಿಸಿ) ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರಿಗೆ ಭಾರತೀಯ ಜನತಾ ಪಕ್ಷದ(ಬಿಜೆಪಿ) ಸಂಸದ ಲೆಹರ್ ಸಿಂಗ್ ಸಿರೋಯಾ ಅವರು ಸೋಮವಾರ ಪತ್ರ ಬರೆದಿದ್ದಾರೆ.ವಕ್ಫ್ ಶಾಸನದ ಭವಿಷ್ಯಕ್ಕೆ ಸಂಬಂಧಿಸಿದಂತೆ ಸೂಕ್ತ ನಿರ್ಧಾರಗಳು ಮತ್ತು ತೀರ್ಮಾನಗಳಿಗೆ ಬರುವಂತೆ ಸಿರೋಯಾ ಸಮಿತಿಗೆ ಮನವಿ ಮಾಡಿದ್ದಾರೆ.
“ಮಾಜಿ ಕರ್ನಾಟಕ ಉಪ ಲೋಕಾಯುಕ್ತ, ನ್ಯಾಯಮೂರ್ತಿ ಎನ್ ಆನಂದ್ ಅವರು ತಯಾರಿಸಿದ ಮತ್ತು ಮಾರ್ಚ್ 2016 ರಲ್ಲಿ ಕರ್ನಾಟಕ ಸರ್ಕಾರಕ್ಕೆ ಸಲ್ಲಿಸಿದ ತನಿಖಾ ವರದಿಯ ಬಗ್ಗೆ ನಿಮ್ಮ ಗಮನಕ್ಕೆ ತರಲಾಗುತ್ತಿದೆ. ಕರ್ನಾಟಕದಲ್ಲಿ ದಶಕಗಳಿಂದ ವಕ್ಫ್ ಆಸ್ತಿಗಳನ್ನು ರಕ್ಷಿಸಲು ಕಾನೂನುಬದ್ಧವಾಗಿ ಅಧಿಕಾರ ಹೊಂದಿರುವವರು ಕಾನೂನುಬಾಹಿರವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ. ಬೇಲಿಯೇ ಎದ್ದು ಹೊಲ ಮೇಯ್ದದಂತಾಗಿದೆ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.
“ಸರ್ಕಾರವು ಗಾಬರಿಗೊಂಡು ತನ್ನ ಸ್ವಂತ ತನಿಖಾ ಆದೇಶವನ್ನು ಏಕೆ ಹಿಂತೆಗೆದುಕೊಂಡಿತು? 2016 ರಲ್ಲಿ ಸಿದ್ದರಾಮಯ್ಯ ಸರ್ಕಾರ ಯಾರನ್ನು ರಕ್ಷಿಸಲು ಪ್ರಯತ್ನಿಸಿತ್ತು? ವಕ್ಫ್ ಆಸ್ತಿಗಳ ಅತಿಕ್ರಮಣ ಮತ್ತು ಅಲ್ಪಸಂಖ್ಯಾತರ ಕಾರಣದ ಬಗ್ಗೆ ಸರ್ಕಾರಕ್ಕೆ ನಿಜವಾಗಿಯೂ ಕಾಳಜಿ ಇದ್ದರೆ, ಈ ತನಿಖಾ ಆಯೋಗವನ್ನು ಏಕೆ ವಿಸರ್ಜಿಸಿತು? ರಾತ್ರೋರಾತ್ರಿ ವರದಿ ಬಂದರೆ ಕಾಂಗ್ರೆಸ್ನ ಕೆಲವು ದೊಡ್ಡ ಹೆಸರುಗಳು, ಸಿದ್ದರಾಮಯ್ಯ ಅವರ ಸ್ನೇಹಿತರು ಮತ್ತು ಪಕ್ಷ ಮತ್ತು ಸರ್ಕಾರದ ಮಿತ್ರರು ಇದ್ದಾರೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.