ಬೆಂಗಳೂರು: ಬಿಜೆಪಿಯ 18 ಶಾಸಕರನ್ನ ಖಂಡಿಸಿ ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ರಾಜ್ಯ ಬಿಜೆಪಿ ಪ್ರತಿಭಟನೆ ನಡೆಸಿತು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, 18 ಶಾಸಕರ ಅಮಾನತು ಸಂವಿಧಾನಬಾಹಿರ ಆಗಿದೆ. ವಿಧಾನಸಭೆ ಸ್ಪೀಕರ್ ಕಾಂಗ್ರೆಸ್ ಪಕ್ಷದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪ ಮಾಡಿದರು.
ಇನ್ನು ಅಮಾನತು ವಾಪಾಸ್ ಪಡೆಯುತ್ತೇನೆ ಅಂತ ಹೇಳಿಕೆ ನೀಡಿದ್ದ ಸ್ಪೀಕರ್ ಯು.ಟಿಖಾದರ್ ಅವರು ಇನ್ನು ಯಾಕಾಗಿ ಕಾಯ್ತಿದ್ದಾರೋ ಗೊತ್ತಿಲ್ಲ. ಅವರ ನಿರ್ಣಯ ಸಂವಿಧಾನ ವಿರೋಧಿ ಅಂತ ಅವರಿಗೋ ಗೊತ್ತಿದೆ. ಆದ್ರೂ ಸಹ ಆಡಳಿತ ಪಕ್ಷದ ಒತ್ತಡಕ್ಕೆ ಮಣಿದು ಸ್ಪೀಕರ್ ಅವರು ಈ ರೀತಿ ವರ್ತಿಸುತ್ತಿದ್ದಾರೆ ಅಂತ ಹೇಳಿದರು.