Top News
ಜಯತೆ, ಜಯತೆ, ಸತ್ಯಮೇವ ಜಯತೆ ಎಂದ ಬಿಜೆಪಿ

ದಲಿತರ ಭೂಮಿಯನ್ನು ಅಕ್ರಮವಾಗಿ ಕಬಳಿಸಿ, ಬಡವರ ಪಾಲಿಗೆ ಸೇರಬೇಕಾಗಿದ್ದ ಸೈಟುಗಳನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದ ಸಿಎಂ ಸಿದ್ದರಾಮಯ್ಯ ಅವರ ವಿರುದ್ದ ಹೈಕೋರ್ಟ್ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿರುವುದು ಸ್ವಾಗತಾರ್ಹ.
ತಮ್ಮ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಘನತೆವೆತ್ತ ರಾಜ್ಯಪಾಲರ ಮೇಲೆ ಕೀಳು ಮಟ್ಟದ ರಾಜಕೀಯಕ್ಕೆ ಕಾಂಗ್ರೆಸ್ ನ ನಾಯಕರು ಮುಂದಾಗಿದ್ದರು. ಆದರೆ ನ್ಯಾಯಾಲಯ ರಾಜ್ಯಪಾಲರ ನಡೆಯನ್ನು ಎತ್ತಿ ಹಿಡಿದು, ಭ್ರಷ್ಟರಿಗೆ ಭಾರತದಲ್ಲಿ ಜಾಗವಿಲ್ಲ ಎಂಬುದನ್ನು ಪುನರುಚ್ಛರಿಸಿದೆ.
ಸಿದ್ದರಾಮಯ್ಯ ಅವರಿಗೆ ಈ ನೆಲದ ಕಾನೂನಿನ ಬಗ್ಗೆ, ಸಂವಿಧಾನದ ಬಗ್ಗೆ , ನ್ಯಾಯಾಲಯದ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ, ಭಂಡತನವನ್ನು ಮುಂದುವರೆಸದೆ, ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕ ಎಂದು ಬಿಜೆಪಿ ಟ್ವೀಟ್ ಮಾಡಿದೆ




