ಕಲಬುರಗಿ :ಸರ್ಕಾರದ ವಿರುದ್ಧ ಸಿಡಿದೆದ್ದಿರುವ ಶಾಸಕ ಬಿ.ಆರ್. ಪಾಟೀಲ್ ಎಲ್ & ಟಿ ಅಧಿಕಾರಿಗಳನ್ನ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಕಲಬುರಗಿಯ ಅಕ್ಕಮಹಾದೇವಿ ಕಾಲೋನಿಯಲ್ಲಿ ಕುಡಿಯುವ ನೀರು ಮತ್ತು ರಸ್ತೆ ಕಾಮಗಾರಿಯನ್ನು ಅರ್ಧಂಬರ್ಧ ಮಾಡಲಾಗಿದೆ. ಕಾಮಗಾರಿ ಪೂರ್ಣಗೊಳಿಸದ ಹಿನ್ನಲೆಯಲ್ಲಿ ಎಲ್ & ಟಿ ಕಂಪನಿ ಅಧಿಕಾರಿಗಳ ಮೇಲೆ ಗರಂ ಆದ್ರು.. ಇದೇ ಧೋರಣೆ ಮುಂದುವರಿಸಿದ್ರೆ ನಿಮ್ಮ ಕಚೇರಿಗೆ ಬೀಗ ಹಾಕುವೆ ಎಂದು ಎಚ್ಚರಿಕೆ ಕೊಟ್ಟ ಶಾಸಕ ಬಿ.ಆರ್.ಪಾಟೀಲ್.