Monday, June 23, 2025
25.9 C
Bengaluru
Google search engine
LIVE
ಮನೆ#Exclusive NewsTop Newsಒಂದಾಗಿ ನುಗ್ಗಿದ ಸಿಂಹ, ಪೂಂಜಗೆ ವಿಜಯೇಂದ್ರ ಸಾಥ್

ಒಂದಾಗಿ ನುಗ್ಗಿದ ಸಿಂಹ, ಪೂಂಜಗೆ ವಿಜಯೇಂದ್ರ ಸಾಥ್

 

ಬಸವೇಶ್ವರ ಠಾಣೆ ಮುಂದೆ ಬಂದಿರುವ ಬಿಜೆಪಿ ಮಾಜಿ ಸಂಸದ ಹಾಗೂ ಬಿಜೆಪಿ ಶಾಸಕ ಪೂಜಾ ಬೆಂಬಲಕ್ಕೆ ಬಿಜೆಪಿಯ ರಾಜ್ಯಧ್ಯಕ್ಷ ಬಿ ವೈ ವಿಜಯೇಂದ್ರ ಈಗ ಸಾತ್ ನೀಡಿದ್ದಾರೆ. ಹಿಂದೂ ಕಾರ್ಯಕರ್ತರು, ಸಾಮಾಜಿಕ ಕಾರ್ಯಕರ್ತರನ್ನು ದ್ವೇಷಿಸುವುದು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಪರಮ ಉದ್ದೇಶವಿದ್ದಂತಿದೆ.

ಹಿಂದೂಪರ ಹಾಗೂ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಪುನೀತ್ ಕೆರೆಹಳ್ಳಿ ವಿರುದ್ಧ ನಿರಂತರ ಕ್ರೌರ್ಯ ಮೆರೆಯುತ್ತಾ ಬಂದಿರುವ ಈ ಸರ್ಕಾರ ರಾಜಸ್ಥಾನದಿಂದ ಬೆಂಗಳೂರಿಗೆ ಬರುತ್ತಿದ್ದ ಟನ್ ಗಟ್ಟಲೆ ಅಕ್ರಮ ಮಾಂಸ ರಫ್ತಿನ ಮಾಫಿಯಾ ಚಟುವಟಿಕೆಯ ಮೇಲೆ ಬೆಳಕು ಚೆಲ್ಲಿದ ಪುನೀತ್ ಕೆರೆಹಳ್ಳಿ ಅವರನ್ನು ಬಂಧಿಸಿ ಅನಾಗರೀಕವಾಗಿ ನಡೆದುಕೊಂಡಿರುವ ಪೊಲೀಸರ ದೌರ್ಜನ್ಯವನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ.

ಜನಜಾಗೃತಿ ಹಾಗೂ ನಾಗರೀಕ ಪ್ರಜ್ಞೆ ಮೆರೆದು ಜನರ ಆರೋಗ್ಯದ ಕಾಳಜಿ ವಹಿಸಿ ಕುರಿ ಮಾಂಸದ ಹೆಸರಿನಲ್ಲಿ ಅನುಮಾನಾಸ್ಪದವಾಗಿ ಬೆಂಗಳೂರಿಗೆ ಸಾಗಿ ಬರುತ್ತಿದ್ದ ಶಂಕಿತ ಮಾಂಸದ ಕುರಿತು ಪ್ರಶ್ನೆ ಮಾಡಿದ್ದು, ಹೋರಾಡಿದ್ದು ತಪ್ಪು ಎಂದು ಪೊಲೀಸರು ಪರಿಗಣಿಸುವುದಾದರೆ, ಇನ್ನು ಮುಂದೆ ಈ ಸರ್ಕಾರದಲ್ಲಿ ಅಕ್ರಮ ಹಾಗೂ ಮಾಫಿಯಾಗಳ ವಿರುದ್ಧ ಹೋರಾಟವನ್ನು ನಡೆಸುವುದು ಕ್ರಿಮಿನಲ್ ಅಪರಾಧವಾಗುತ್ತದೆ ಎಂದು ಪೊಲೀಸರು ಸಂದೇಶ ರವಾನಿಸಿದ್ದಾರೆ.

ಜನರ ಆರೋಗ್ಯದ ಕಾಳಜಿಗಾಗಿ ಪ್ರಾಮಾಣಿಕವಾಗಿ ದನಿಯೆತ್ತಿದ ಪುನೀತ್ ಕೆರೆಹಳ್ಳಿ ಅವರನ್ನು ಬಂಧಿಸಿ ಅನಾಗರಿಕವಾಗಿ ವರ್ತಿಸಿರುವ ಪೊಲೀಸರ ನಡವಳಿಕೆ ಬ್ರಿಟಿಷರ ಕಾಲದ ದಮನಕಾರಿ ಧೋರಣೆಯನ್ನು ಪ್ರತಿಬಿಂಬಿಸಿದೆ. ಪೊಲೀಸರ ಕ್ರೌರ್ಯ ಹಾಗೂ ಅಟ್ಟಹಾಸವನ್ನು ಬಿಜೆಪಿ ಖಂಡಿಸುತ್ತದೆ. ನಿಂದು ಬಿಜೆಪಿ ರಾಜ್ಯಧ್ಯಕ್ಷ ವಿಜಯೇಂದ್ರ ತಿಳಿಸಿದ್ದಾರೆ

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments