Thursday, August 21, 2025
27.3 C
Bengaluru
Google search engine
LIVE
ಮನೆ#Exclusive NewsTop Newsಮರಕ್ಕೆ ಕಾರು ಡಿಕ್ಕಿ; ವೈದ್ಯರು, ಓರ್ವ ವಕೀಲ ಸ್ಥಳದಲ್ಲೇ ಸಾವು

ಮರಕ್ಕೆ ಕಾರು ಡಿಕ್ಕಿ; ವೈದ್ಯರು, ಓರ್ವ ವಕೀಲ ಸ್ಥಳದಲ್ಲೇ ಸಾವು

ಬಳ್ಳಾರಿ: ರಸ್ತೆ ಪಕ್ಕದ ಮರಕ್ಕೆ ಕಾರುವೊಂದು ಡಿಕ್ಕಿ ಹೊಡೆದ ಪರಿಣಾಮ ಬಳ್ಳಾರಿ ಬಿಮ್ಸ್ ಆಸ್ಪತ್ರೆಯ ಇಬ್ಬರು ವೈದ್ಯರು ಹಾಗೂ ಓರ್ವ ವಕೀಲ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರ ಗಡಿಭಾಗದ ವಿಡಪನಕಲ್ ಬಳಿ ಘಟನೆ ನಡೆದಿದೆ.

ಡಾ.ಗೋವಿಂದರಾಜುಲು, ಡಾ.ಯೋಗೇಶ್ ಮತ್ತು ವಕೀಲ ವೆಂಕಟನಾಯ್ಡು (55) ಮೃತ ದುರ್ದೈವಿಗಳು. ಘಟನೆಯಲ್ಲಿ ಮತ್ತೋರ್ವ ಖಾಸಗಿ ಆಸ್ಪತ್ರೆ ವೈದ್ಯ ಅಮರೇಗೌಡ ಪಾಟೀಲ್ ಸ್ಥಿತಿ ಗಂಭೀರವಾಗಿದೆ. ವಿದೇಶಿ ಪ್ರವಾಸಕ್ಕೆ ತೆರಳಿದ್ದ ಸ್ನೇಹಿತರು ಬಳ್ಳಾರಿಗೆ ವಾಪಸ್ಸಾಗುತ್ತಿದ್ದ ವೇಳೆ ಘಟನೆ ನಡೆದಿದೆ.

ಬೆಂಗಳೂರು ವಿಮಾನ ನಿಲ್ದಾಣದಿಂದ ಅನಂತಪುರ ಮಾರ್ಗವಾಗಿ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಬೆಳಗಿನ ಜಾವ ನಿದ್ದೆ ಮಂಪರಿನಲ್ಲಿ ಅಪಘಾತ ಸಂಭವಿಸಿರಬಹುದು ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments