Wednesday, January 28, 2026
18.8 C
Bengaluru
Google search engine
LIVE
ಮನೆರಾಜ್ಯಮೀನುಗಳಿಗೆ ವಿಷ ಹಾಕಿದ ದುಷ್ಕರ್ಮಿಗಳು

ಮೀನುಗಳಿಗೆ ವಿಷ ಹಾಕಿದ ದುಷ್ಕರ್ಮಿಗಳು

ಚಾಮರಾಜನಗರ : ಯಾರೋ ಕಿಡಿಗೇಡಿಗಳು ವಿಷ ಹಾಕಿರುವ ಪರಿಣಾಮ ಬಡ ರೈತ ಸಾಕಿದ್ದ ಸಾವಿರಾರು ಮೀನುಗಳ ಮಾರಣ ಹೋಮವಾಗಿದೆ.

ಚಾಮರಾಜನಗರದ ರಾಮಸಮುದ್ರದಲ್ಲಿ ಘಟನೆ ನಡೆದಿದ್ದು, ರಾಮಸಮುದ್ರದ ರೈತ ಮಹೇಶ್ ಬಾಬು ಎಂಬುವವರು ಜಮೀನಿನ ಹೊಂಡದಲ್ಲಿ ಮೀನು ಸಾಕಾಣಿಕೆ ಮಾಡಿದ್ದರು.
ರಾಮಸಮುದ್ರ- ಬಸವನಪುರ ರಸ್ತೆಯಲ್ಲಿರುವ ಮಹದೇಶ್ವರ ದೇವಾಲಯದ ಸಮೀಪದ ಜಮೀನಿನಲ್ಲಿ ಈ ದುರ್ಘಟನೆ ನಡೆದಿದೆ.

ರೈತ ಮಹೇಶ್ ಬಾಬು ತಮ್ಮ ಜಮೀನಿನ‌ ಹೊಂಡದಲ್ಲಿ ರೈತ ಮಹೇಶ್ ಬಾಬು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಮೀನು ಸಾಕಾಣಿಕೆ ಮಾಡಿದ್ದರು, ಆದರೆ ರಾತ್ರೋರಾತ್ರಿ ಕಿಡಿಗೇಡಿಗಳು ಮೀನಿನ ಹೊಂಡಕ್ಕೆ ವಿಷ ಹಾಕಿರುವ ಪರಿಣಾಮ ಮೀನು ಸಾಕಾಣಿಕೆ ಘಟಕದಲ್ಲಿದ್ದ ಸಾವಿರಾರು ಮೀನುಗಳು ಏಕಕಾಲದಲ್ಲಿ ಸಾವನ್ನಪ್ಪಿವೆ ಎಂದು ರೈತ ಮಹೇಶ್ ಬಾಬು ನೋವು ಹಂಚಿಕೊಂಡಿದ್ದಾರೆ

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments