ರಾಜ್ಯ

ಮೀನುಗಳಿಗೆ ವಿಷ ಹಾಕಿದ ದುಷ್ಕರ್ಮಿಗಳು

ಚಾಮರಾಜನಗರ : ಯಾರೋ ಕಿಡಿಗೇಡಿಗಳು ವಿಷ ಹಾಕಿರುವ ಪರಿಣಾಮ ಬಡ ರೈತ ಸಾಕಿದ್ದ ಸಾವಿರಾರು ಮೀನುಗಳ ಮಾರಣ ಹೋಮವಾಗಿದೆ.

ಚಾಮರಾಜನಗರದ ರಾಮಸಮುದ್ರದಲ್ಲಿ ಘಟನೆ ನಡೆದಿದ್ದು, ರಾಮಸಮುದ್ರದ ರೈತ ಮಹೇಶ್ ಬಾಬು ಎಂಬುವವರು ಜಮೀನಿನ ಹೊಂಡದಲ್ಲಿ ಮೀನು ಸಾಕಾಣಿಕೆ ಮಾಡಿದ್ದರು.
ರಾಮಸಮುದ್ರ- ಬಸವನಪುರ ರಸ್ತೆಯಲ್ಲಿರುವ ಮಹದೇಶ್ವರ ದೇವಾಲಯದ ಸಮೀಪದ ಜಮೀನಿನಲ್ಲಿ ಈ ದುರ್ಘಟನೆ ನಡೆದಿದೆ.

ರೈತ ಮಹೇಶ್ ಬಾಬು ತಮ್ಮ ಜಮೀನಿನ‌ ಹೊಂಡದಲ್ಲಿ ರೈತ ಮಹೇಶ್ ಬಾಬು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಮೀನು ಸಾಕಾಣಿಕೆ ಮಾಡಿದ್ದರು, ಆದರೆ ರಾತ್ರೋರಾತ್ರಿ ಕಿಡಿಗೇಡಿಗಳು ಮೀನಿನ ಹೊಂಡಕ್ಕೆ ವಿಷ ಹಾಕಿರುವ ಪರಿಣಾಮ ಮೀನು ಸಾಕಾಣಿಕೆ ಘಟಕದಲ್ಲಿದ್ದ ಸಾವಿರಾರು ಮೀನುಗಳು ಏಕಕಾಲದಲ್ಲಿ ಸಾವನ್ನಪ್ಪಿವೆ ಎಂದು ರೈತ ಮಹೇಶ್ ಬಾಬು ನೋವು ಹಂಚಿಕೊಂಡಿದ್ದಾರೆ

Comments (0)

Your email address will not be published. Required fields are marked *

Back to top button