Tuesday, January 27, 2026
24 C
Bengaluru
Google search engine
LIVE
ಮನೆ#Exclusive NewsTop Newsವಾರಾಂತ್ಯದಲ್ಲಿ ದರ್ಶನ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಸಾಧ್ಯತೆ

ವಾರಾಂತ್ಯದಲ್ಲಿ ದರ್ಶನ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಸಾಧ್ಯತೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ನಟ ದರ್ಶನ್ ತೂಗುದೀಪ ಮತ್ತು ಅವರ ಆಪ್ತೆ ಪವಿತ್ರಾ ಗೌಡ ಸೇರಿದಂತೆ 15 ಮಂದಿಯನ್ನು ಬಂಧಿಸಿ ತನಿಖೆ ನಡೆಸುತ್ತಿರುವ ಪೊಲೀಸರ ತಂಡ ಇದೇ ವಾರ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸುವ ಸಾಧ್ಯತೆ ಇದೆ.

ಬಿಗಿಯಾದ ಚಾರ್ಜ್ ಶೀಟ್ ರೂಪಿಸಲಾಗುತ್ತಿದೆ. ಅದು ಅಂತಿಮ ಹಂತದಲ್ಲಿದೆ. ತನಿಖಾ ತಂಡ ಕೆಲವು ವಿಧಿವಿಜ್ಞಾನ ಮತ್ತು ಇತರ ತಾಂತ್ರಿಕ ವರದಿಗಳನ್ನು ನಿರೀಕ್ಷಿಸುತ್ತಿದೆ. ಅವುಗಳನ್ನು ಪಡೆದ ನಂತರ, ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ತನಿಖೆಯ ಭಾಗವಾಗಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರುTNIE ಗೆ ತಿಳಿಸಿದ್ದಾರೆ.

ವಿಧಿ ವಿಜ್ಞಾನ ಪ್ರಯೋಗಾಲಯ ವರದಿ ಆರು ಪ್ರಮುಖ ಆರೋಪಿಗಳ ಬಟ್ಟೆಗಳ ಮೇಲೆ ಸಂತ್ರಸ್ತನ ರಕ್ತದ ಕಲೆಗಳನ್ನು ದೃಢಪಡಿಸಿದೆ. ಘಟನೆಯ ವೇಳೆ ಆರು ಆರೋಪಿಗಳು ಧರಿಸಿದ್ದ ಬಟ್ಟೆ, ಪಾದರಕ್ಷೆ ಮತ್ತು ಚರ್ಮದ ವಸ್ತುಗಳನ್ನು ಅವರ ಬಂಧನದ ನಂತರ ಅವರ ಮನೆಗಳಿಂದ ವಶಪಡಿಸಿಕೊಳ್ಳಲಾಗಿತ್ತು ಎಂದು ಅವರು ಹೇಳಿದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments