ಬೆಂಗಳೂರು: ಲೋಕಾ ಕದನಕ್ಕೆ ಕೆಲವೇ ತಿಂಗಳುಗಳು ಬಾಕಿ ಇದೆ. ರಾಜ್ಯದಲ್ಲಿ 3ಪಕ್ಷಗಳು ಭರ್ಜರಿ ಸಮರಾಭ್ಯಾಸ ಮಾಡ್ತಿವೇ..ಅದರಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರೋದು ಕಾಂಗ್ರೆಸ್ಗೆ ಅಂಗಳದಲ್ಲಿ ಟೆನ್ಷನ್ ಹೆಚ್ಚಿಸಿದೆ. ಹೀಗಾಗಿ ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆಲ್ಲುವ ಗುರಿ ಇಟ್ಟುಕೊಂಡಿರುವ ಕಾಂಗ್ರೆಸ್ ತಂತ್ರ-ರಣತಂತ್ರಗಳನ್ನು ರೂಪಿಸುತ್ತಿದೆ. ಇದರ ಬೆನ್ನಲ್ಲೇ ಸಿಎಂ ನಿವಾಸ ಕಾವೇರಿಯಲ್ಲಿ ಸಂಪುಟ ಸಚಿವರ ಜೊತೆ ರಾತ್ರಿ ಸಿಎಂ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ.
ತಡರಾತ್ರಿವರೆಗೂ ನಡೆದ ಡಿನ್ನರ್ ಮೀಟಿಂಗ್ನಲ್ಲಿ ಸಚಿವ ರಾಮಲಿಂಗಾರೆಡ್ಡಿ, ಲಕ್ಷ್ಮಿಹೆಬ್ಬಾಳ್ಕರ್, ಜಮೀರ್ ಅಹ್ಮದ್, ಕೆ.ಹೆಚ್ ಮುನಿಯಪ್ಪ ಸೇರಿದಂತೆ ಬಹುತೇಕ ಸಚಿವರು ಹಾಜರಾಗಿದ್ರು. ರಾಮ ಮಂದಿರ ಉದ್ಘಾಟನೆ ಬಳಿಕ ಬಿಜೆಪಿ ರಾಜ್ಯದಲ್ಲಿ ಹೆಚ್ಚು ಆಕ್ಟೀವ್ ಆಗಿದೆ. ಬಿಜೆಪಿ ಆಕ್ಟೀವ್ ಕಾರಣಕ್ಕೆ ಸಚಿವರ ಜೊತೆ ಸಿಎಂ ಡಿನ್ನರ್ ಮೀಟಿಂಗ್ ಮಾಡಿ, ಬಿಜೆಪಿ-ಜೆಡಿಎಸ್ ಕಟ್ಟಿಹಾಕುವ ಬಗ್ಗೆ ಚರ್ಚೆ ಮಾಡಿದ್ದಾರೆ. ಹಾಗೂ ಕೆಲವೊಂದು ಸೂಚನೆಗಳನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ.
ಸಿಎಂ ನಿವಾಸದಲ್ಲಿ ನಡೆದ ಡಿನ್ನರ್ ಮೀಟಿಂಗ್ನಲ್ಲಿ ಲೋಕಸಭಾ ಚುನಾವಣೆ ವಿಚಾರವಾಗಿ ಮಹತ್ವದ ಚರ್ಚೆ ನಡೆದಿದೆ. ಎಲ್ಲರೂ ಜವಾಬ್ದಾರಿ ತೆಗೆದುಕೊಳ್ತೀವಿ ಅಂತ ಸಿಎಂ ಮುಂದೆ ಒಪ್ಪಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಲೋಕಸಭೆಯಲ್ಲಿ ಸಚಿವರ ಸ್ಪರ್ಧೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತೆ. ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಧಾನ ಗೆಲ್ಲುತ್ತೇವೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಲೋಕಸಭೆ ಚುನಾವಣೆ ಹತ್ತಿರವಾಗ್ತಿದಂತೆ ರಾಜಕೀಯ ಪಕ್ಷಗಳು ತಂತ್ರ, ಪ್ರತಿತಂತ್ರ-ರತಂತ್ರಗಳನ್ನು ಎಣೆಯುತ್ತಿವೆ.


