Wednesday, January 28, 2026
17 C
Bengaluru
Google search engine
LIVE
ಮನೆUncategorizedವಿಧಾನಸೌಧ ಪಡಸಾಲೆಯಲ್ಲಿ ಸಿಎಂ ಜನಸ್ಪಂದನ: 10 ಸಾವಿರ ಚೇರ್ 36 ಇಲಾಖೆಗಳ ಕೌಂಟರ್!

ವಿಧಾನಸೌಧ ಪಡಸಾಲೆಯಲ್ಲಿ ಸಿಎಂ ಜನಸ್ಪಂದನ: 10 ಸಾವಿರ ಚೇರ್ 36 ಇಲಾಖೆಗಳ ಕೌಂಟರ್!

ಬೆಂಗಳೂರು : ಒಂದಲ್ಲಾ, ಎರಡಲ್ಲ, ಹತ್ತಾರು ಸಮಸ್ಯೆಗಳಿಗೆ ಪರಿಹಾರ ಸಿಗುತ್ತೆ ಅನ್ನೋ ಭರವಸೆಯಲ್ಲಿ ಇಂದು ಬೆಂಗಳೂರಿಗೆ ರಾಜ್ಯದ ಜನತೆ ಅರ್ಜಿಗಳ ಸಮೇತ ದೌಡಾಯಿಸಿದೆ, ಹೌದು ಮನೆ ಇಲ್ಲ, ರೇಷನ್‌ಕಾರ್ಡ್ ಇಲ್ಲ, ಕೆಲಸ ಇಲ್ಲ, ಚಿಕಿತ್ಸೆಗೆ ಹಣ ಇಲ್ಲ, ವರ್ಗಾವಣೆ ಆಗ್ತಿಲ್ಲ. ಹೀಗೆ ನೂರಾರು ಸಮಸ್ಯೆ ಹೊಂದಿರೋ ಜನ ಹತ್ತಾರು ಭಾರಿ ಅಧಿಕಾರಿಗಳ ಬಳಿ ಅಲೆದಾಡಿ ಹತಾಶೆ ಗೊಂಡಿರ್ತಾರೆ. ಸಿಎಂ ಬಳಿಯೇ ದೂರು ಸಲ್ಲಿಸಬೇಕು ಅಂದುಕೊಂಡಿರ್ತಾರೆ.

ಅಂತವರಿಗೆ ಸಿಎಂ ಸಿದ್ದರಾಮಯ್ಯ ಅವಕಾಶ ಕಲ್ಪಿಸಿದ್ದಾರೆ. ಕಳೆದ ಸೆಪ್ಟೆಂಬರ್‌ನಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಜನಸ್ಪಂದನ ನಡೆಸಿದ್ದ ಸಿಎಂ, ಸಾವಿರಾರು ಜನರ ಅಹವಾಲು ಸ್ವೀಕರಿಸಿ ಪರಿಹರಿಸಿದ್ರು. ಇಂದು ವಿಧಾನಸೌಧದ ಆವರಣದಲ್ಲೇ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿದೆ. ಬೆಳಗ್ಗೆ 10 ರಿಂದ ಸಂಜೆ 6 ಗಂಟೆ ತನಕ ಜನಸ್ಪಂದನ ನಡೆಯಲಿದೆ‌. 10 ಸಾವಿರ ಜನರಕ್ಕೆ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ. ಗ್ರ್ಯಾಂಡ್‌ ಸ್ಟೆಪ್‌ ಮುಂಭಾಗ ಜರ್ಮನ್‌ ಟೆಂಟ್‌ ಹಾಕಲಾಗಿದೆ.

ಸಾರ್ವಜನಿಕರು ತಮ್ಮ ಗುರುತಿನ ಚೀಟಿಯೊಂದಿಗೆ ನೋಂದಣಿ ಮಾಡಿಕೊಳ್ಳಬೇಕು. ಆಧಾರ್‌, ವೋಟರ್‌ ಐಡಿ, ರೇಷನ್‌ಕಾರ್ಡ್ ಸೇರಿದಂತೆ ಸರ್ಕಾರದ ಯಾವುದಾದ್ರೂ ಗುರುತಿನ ಚೀಟಿ ತೋರಿಸಬೇಕು. ಇನ್ನು ಸಮಸ್ಯೆಗೆ ತಕ್ಕಂತೆ ಇಲಾಖೆಯ ಕೌಂಟರ್‌ ನಂಬರ್‌ ಹೇಳಲಾಗುತ್ತೆ. ಅದೇ ಕೌಂಟರ್‌ ಬಳಿ ಹೋಗಿ ಮನವಿ ಸಲ್ಲಿಸಬೇಕು. ಇದಕ್ಕಾಗಿ 36 ಇಲಾಖೆಗಳ ಕೌಂಟರ್‌ ತೆರೆಯಲಾಗಿದೆ. ಇಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳಿಂದಲೇ ಮನವಿ ಸ್ವೀಕರಿಸಲಿದ್ದಾರೆ. ಬಳಿಕ ಕೌಂಟರ್‌ಗೆ ತೆರಳಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅರ್ಜಿ ಸ್ವೀಕರಿಸಲಿದ್ದಾರೆ. ಇನ್ನೂ ಆನ್‌ಲೈನ್‌ನಲ್ಲೂ ಅರ್ಜಿ ಸಲ್ಲಿಕೆಗೆ ಅವಕಾಶ ಇದ್ದು, 1902 ಸಂಖ್ಯೆಗೆ ಕರೆ ಮಾಡಿ ಅರ್ಜಿ ಸಲ್ಲಿಕೆ ಮಾಡಬಹುದು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments