Thursday, November 20, 2025
22.5 C
Bengaluru
Google search engine
LIVE
ಮನೆ#Exclusive Newsಹೈಕಮಾಂಡ್ ಗೆ ದೂರು ಕೊಟ್ಟು ಡಿಕೆಗೆ ಬ್ರೇಕ್ ಹಾಕೋಕೆ ಪ್ಲ್ಯಾನ್..?

ಹೈಕಮಾಂಡ್ ಗೆ ದೂರು ಕೊಟ್ಟು ಡಿಕೆಗೆ ಬ್ರೇಕ್ ಹಾಕೋಕೆ ಪ್ಲ್ಯಾನ್..?

ರಾಜ್ಯಕ್ಕೆ ವೇಣುಗೋಪಾಲ್ ಭೇಟಿ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯ ಆಪ್ತ ಬಳಗದಲ್ಲಿ ಚಟುವಟಿಕೆಗಳು ಹೆಚ್ಚಾಗಿವೆ. ಡಿ.ಕೆ.ಶಿವಕುಮಾರ್ ಹೇಳಿಕೆ ವಿರುದ್ಧ ವೇಣುಗೋಪಾಲ್​ಗೆ ದೂರು ನೀಡುವ ಸಾಧ್ಯತೆ ಇದೆ. ಅಧಿಕಾರ ಹಂಚಿಕೆ ಹೇಳಿಕೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್​ನಲ್ಲಿ ಗದ್ದಲ ಶುರುವಾಗಿದೆ. ಅಧಿಕಾರ ಹಂಚಿಕೆ ಮಾತುಕತೆ ಆಗಿದೆ. ಕಾಲ ಬಂದಾಗ ಉತ್ತರ ನೀಡುತ್ತೇನೆ ಎಂದು ಶಿವಕುಮಾರ್ ಪದೇ ಪದೆ ಹೇಳ್ತಿದ್ದಾರೆ. ವಿಧಾನಸಭೆ ಕಲಾಪದಲ್ಲೂ ಡಿಕೆಶಿ ಈ ಬಗ್ಗೆ ಮಾತನ್ನಾಡಿದ್ದಾರೆ.

ಅಧಿಕಾರ ಹಂಚಿಕೆಯ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಹೇಳಿಕೆಯಿಂದ ಕಾಂಗ್ರೆಸ್​ ಹೈಕಮಾಂಡ್ ಅಲರ್ಟ್ ಆಗಿದೆ. ಅಂತೆಯೇ ಇಂದು ಅಥವಾ ನಾಳೆ ರಾಜ್ಯಕ್ಕೆ ಕೆ.ಸಿ.ವೇಣುಗೋಪಾಲ್ ಭೇಟಿ ನೀಡಲಿದ್ದಾರೆ.

ಅಧಿಕಾರವನ್ನು ಒದ್ದು ಕಿತ್ತುಕೊಳ್ಳಬೇಕು ಎಂದು ವಿಧಾನಸೌಧದಲ್ಲಿ ಹೇಳಿದ್ದರು. ಉಪಮುಖ್ಯಮಂತ್ರಿಗಳ ಈ ಹೇಳಿಕೆಯಿಂದ ಸಿಎಂ ಸಿದ್ದರಾಮಯ್ಯಗೆ ಮುಜುಗರ ಆಗ್ತಿದೆ. ಹೀಗಾಗಿ ಸಿಎಂ ಆಪ್ತ ಬಳಗ ದೂರು ನೀಡುವ ಸಾಧ್ಯತೆ ಇದೆ. ಆ ಮೂಲಕ ಶಿವಕುಮಾರ್ ಅವರ ಬಹಿರಂಗ ಹೇಳಿಕೆಗೆ ಬ್ರೇಕ್ ಹಾಕಲು ಸಿದ್ದರಾಮಯ್ಯ ಬೆಂಬಲಿಗರು ಮುಂದಾಗಿದ್ದಾರೆ ಎನ್ನಲಾಗಿದೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments