Tuesday, January 27, 2026
26.9 C
Bengaluru
Google search engine
LIVE
ಮನೆ#Exclusive NewsTop Newsಯಶವಂತಪುರ ಪೊಲೀಸ್‌ ಠಾಣೆಯಲ್ಲಿ ನಟ ರಕ್ಷಿತ್ ಶೆಟ್ಟಿ ವಿರುದ್ಧ FIR ದಾಖಲು; ಹಾಡು ಕದ್ದಿದ್ದು ನಿಜವೇ?

ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ನಟ ರಕ್ಷಿತ್ ಶೆಟ್ಟಿ ವಿರುದ್ಧ FIR ದಾಖಲು; ಹಾಡು ಕದ್ದಿದ್ದು ನಿಜವೇ?

ಕನ್ನಡ ಚಿತ್ರರಂಗದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮತ್ತೊಮ್ಮೆ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಪರಂವಾ ಸ್ಟುಡಿಯೋಸ್‌ ಅಡಿಯಲ್ಲಿ ಬ್ಯಾಚುಲರ್ ಪಾರ್ಟಿ ಸಿನಿಮಾವನ್ನು ರಕ್ಷಿತ್ ನಿರ್ಮಾಣ ಮಾಡಿದ್ದರು. ನಟ ದಿಗಂತ್, ಲೂಸ್ ಮಾದಾ ಯೋಗಿ ಹಾಗೂ ಅಚ್ಯುತ್ ಕುಮಾರ್‌ ಕಾಂಬಿನೇಷನ್‌ನಲ್ಲಿ ಮೂಡಿ ಬಂದ ಸಿನಿಮಾ ಇದಾಗಿದ್ದು ದೊಡ್ಡ ಪರದೆಗಿಂತ ಓಟಿಟಿಯಲ್ಲಿ ಹೆಚ್ಚಿಗೆ ಸದ್ದು ಮಾಡಿತ್ತು. ಈಗ ರಕ್ಷಿತ್ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ.

ಹೌದು! ಬ್ಯಾಚುಲರ್ ಪಾರ್ಟಿ ಚಿತ್ರದಲ್ಲಿ ಇರುವ ಎರಡು ಹಾಡುಗಳ ವಿರುದ್ಧ ದೂರು ದಾಖಲಾಗಿದೆ. ಗಾಳಿ ಮಾತು ಹಾಗೂ ನ್ಯಾಯ ಎಲ್ಲಿದೆ ಎಂಬ ಹಾಡನ್ನು ಕದ್ದಿರುವ ಆರೋಪ ಕೇಳಿ ಬಂದಿದೆ. ನ್ಯಾಯ ಎಲ್ಲಿದೆ ಹಾಡು ಚಿತ್ರದ ಟೈಟಲ್ ಸಾಂಗ್ ಆಗಿದ್ದು, ಒಮ್ಮೆ ನಿನ್ನನ್ನೂ ಕಣ್ತುಂಬ ನೋಡುವಾಸೆ ಎಂದು ರೋಮ್ಯಾಂಟಿಕ್ ಸಾಂಗ್ ಆಗಿದ್ದು, ಇದನು ಕದ್ದಿದ್ದಾರೆ ಎನ್ನಲಾಗಿದೆ. ಬ್ಯಾಚುಲರ್ ಪಾರ್ಟಿ ಚಿತ್ರದ ಒಟಿಟಿ ಕಾಪಿರೈಟ್ಸ್‌ ಮಾಲೀಕತ್ವ ಪಡೆದಿರುವವರು ದೂರು ನೀಡಿದ್ದಾರೆ.

ಈಗಾಗಲೆ ನವೀನ್‌ ಕುಮಾರ್‌ ಎಂಬುವವರ ಜೊತೆ ಮಾತುಕತೆ ನಡೆದಿದೆ. ಹಾಡುಗಳ ಕಾಪಿರೈಟ್‌ ಪಡೆದು ಮಾರಾಟ ಮಾಡುವ ಖ್ಯಾತ ಬ್ಯುಸಿಸೆನ್‌ ಮ್ಯಾನ್‌ ನವೀನ್‌ ಕುಮಾರ್ ಈಗ ಅನುಮತಿ ಇಲ್ಲದೆ ಹಾಡನ್ನು ಚಿತ್ರದಲ್ಲಿ ಬಳಸಿದ್ದಾರೆ ಎಂದು ಯಶವಂತಪುತ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಈ ಹಿಂದೆ  ಕಿರಿಕ್ ಪಾರ್ಟಿ ಚಿತ್ರದಲ್ಲೂ ಹಂಸಲೇಖರ ಒಂದು ಟ್ಯೂನ್‌ ಕದ್ದಿದ್ದರು ಎಂದು ಆರೋಪಿಸಲಾಗಿತ್ತು. ಯಾಕೆ ರಕ್ಷಿತ್ ಶೆಟ್ಟಿ ಚಿತ್ರಗಳಲ್ಲಿ ಕದ್ದಿರುವ ಹಾಡುಗಳು ಹೆಚ್ಚಿರುತ್ತದೆ ಎಂದು ನೆಟ್ಟಿಗರು ಪ್ರಶ್ನೆಸುತ್ತಿದ್ದಾರೆ.

ಸರಿ ಇಲ್ಲದ ಸಂಬಂಧದ ವಿಷಾದ, ದೂರಾದ ತಂದೆ ಮಗನ ಮಧ್ಯದ ಬಾಂಧವ್ಯ, ಸ್ನೇಹಿತರ ನಡುವಿನ ತರ್ಲೆ ತಮಾಷೆ ಸಂತೋಷ ಸೇರಿರುವ ಕಥನವಿದು. ಇಲ್ಲಿ ಎಲ್ಲಕ್ಕೂ ತಮಾಷೆಯ ಹೊದಿಕೆ ಇದೆ. ಎಲ್ಲಕ್ಕೂ ನಗುವಿನ ಲೇಪ ಇದೆ. ಹಾಗಾಗಿ ಇದೊಂದು ತಮಾಷೆಯಿಂದ ಆರಂಭವಾಗಿ ತಮಾಷೆಯಲ್ಲೇ ಮುಗಿಯುವ ಸಿನಿಮಾ ಎಂದು ರಾಜೇಶ್ ಶೆಟ್ಟಿ ವಿಮರ್ಶೆ ಮಾಡಿದ್ದರು.

 

ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments