ಬೆಂಗಳೂರು :ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು, ಜೆಡಿಎಸ್ ಪಕ್ಷವನ್ನು ಮುಗಿಸಬೇಕೆಂದು ಕಾಂಗ್ರೆಸ್ ಹೊಂಚು ಹಾಕುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಆರೋಪಿಸಿದ್ದಾರೆ.ಯಾವುದೇ ಕಾರಣಕ್ಕೂ ಅದರ ಕನಸು ಈಡೇರುವುದಿಲ್ಲ ಎಂದು ಕಠಿಣ ಎಚ್ಚರಿಕೆ ನೀಡಿದರು.
ದಾವಣಗೆರೆಯ ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ ಅವರು 11 ಜೆಡಿಎಸ್ ಶಾಸಕರು ಸದ್ಯದಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಬರಲಿದ್ದಾರೆ ಎಂದು ಹೇಳಿ ರಾಜ್ಯ ರಾಜಕೀಯದಲ್ಲಿ ಧೂಳೆಬ್ಬಿಸಿದ್ದಾರೆ. ಅವರ ಈ ಹೇಳಿಕೆಯು ಜೆಡಿಎಸ್ ಪಾಳಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಇರುವ ಜೆಡಿಎಸ್ ಶಾಸಕರ ಸಂಖ್ಯೆ 18 ಮಾತ್ರವೇ. ಇದರಲ್ಲಿ 11 ಶಾಸಕರು ಪಕ್ಷ ತೊರೆಯುತ್ತಾರೆನ್ನುವುದು ದೊಡ್ಡ ಸಂಗತಿ. ನಿನ್ನೆ ಜೆಡಿಎಸ್ ಸಭೆಯಲ್ಲಿ ಕುಮಾರಸ್ವಾಮಿ ಮತ್ತು ದೇವೇಗೌಡರು ಜೆಡಿಎಸ್ ಶಾಸಕರು ಮತ್ತು ಮುಖಂಡರಿಗೆ ಧೈರ್ಯ ತುಂಬವ ಪ್ರಯತ್ನ ಮಾಡಿದ್ದಾರೆ.