Thursday, November 20, 2025
24.6 C
Bengaluru
Google search engine
LIVE
ಮನೆ#Exclusive Newsಸಂಕ್ರಾಂತಿಗೆ ದರ್ಶನ್​ಗೆ ಆಪರೇಷನ್...! ಡಿ ಬಾಸ್​ಗೆ ಸುಪ್ರೀಂ ಭಯ...!

ಸಂಕ್ರಾಂತಿಗೆ ದರ್ಶನ್​ಗೆ ಆಪರೇಷನ್…! ಡಿ ಬಾಸ್​ಗೆ ಸುಪ್ರೀಂ ಭಯ…!

ಸಂಕ್ರಾತಿ ವೇಳೆಗೆ ದರ್ಶನ್ ಆಪರೇಷನ್ ಮಾಡಿಸಿಕೊಳ್ಳಲಿದ್ದಾರೆ. ಮೈಸೂರಿನಲ್ಲಿಯೇ ಆಪರೇಷನ್ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ದರ್ಶನ್ ಅವರಿಗೆ ವೈದ್ಯ ಅಜಯ್ ಹೆಗಡೆ ಅವರು ಚಿಕಿತ್ಸೆ ನೀಡುತ್ತಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿದ್ದ ದರ್ಶನ್ ಅವರು ಈಗ ಜಾಮೀನು ಪಡೆದು ಹೊರ ಬಂದಿದ್ದಾರೆ. ಅವರಿಗೆ ಬೆನ್ನು ನೋವು ಅತಿಯಾಗಿ ಕಾಡಿತ್ತು. ಡಿಸ್ಕ್​ನ ಸಮಸ್ಯೆಯಿಂದಾಗಿ ಈ ರೀತಿ ಆಗಿದೆ ಎಂದು ವರದಿಯಲ್ಲಿ ಉಲ್ಲೇಖ ಆಗಿತ್ತು. ಈಗ ದರ್ಶನ್​ ಅವರಿಗೆ ಆಪರೇಷನ್ ಮಾಡಿಸೋದು ಅನಿವಾರ್ಯ ಆಗಿದೆ. ಅವರಿಗೆ ಬೆನ್ನು ನೋವು ವಾಸಿಯಾಗುವ ಲಕ್ಷಣ ಕಾಣುತ್ತಿಲ್ಲ. ಹೀಗಾಗಿ, ಬೇರೆ ದಾರಿ ಕಾಣದೆ ಅವರು ಆಪರೇಷನ್​ಗೆ ಒಪ್ಪಿಗೆ ಕೊಟ್ಟಿದ್ದಾರೆ.

ದರ್ಶನ್ ಅವರು ಐಷಾರಾಮಿ ಆಗಿ ಜೀವನ ನಡೆಸಿದವರು. ಈ ಕಾರಣಕ್ಕೆ ಜೈಲು ವಾಸ ಅವರಿಗೆ ಕಷ್ಟ ಆಯಿತು. ಜೈಲಿನಲ್ಲಿ ಕೂರಲು, ಮಲಗಲು ಅವರಿಗೆ ಬೇಕಾದ ರೀತಿಯ ವ್ಯವಸ್ಥೆ ಇಲ್ಲದ ಕಾರಣ ಬೆನ್ನು ನೋವು ಆರಂಭ ಆಯಿತು. ದರ್ಶನ್ ಅವರು ಆಪರೇಷನ್ ನೀಡಿ ಮಧ್ಯಂತರ ಜಾಮೀನು ಪಡೆದರು. ಇಷ್ಟು ದಿನಗಳ ಕಾಲ ಅವರು ಫಿಸಿಯೋ ಥೆರಪಿ ಮೂಲಕ ನೋವನ್ನು ಕಡಿಮೆ ಮಾಡಿಕೊಳ್ಳುವ ಪ್ರಯತ್ನ ಮಾಡಿದರು. ಆದರೆ, ಅದು ಸಾಧ್ಯವಾಗಿಲ್ಲ. ಹೀಗಾಗಿ, ಅವರು ಆಪರೇಷನ್ ಮಾಡಿಸಿಕೊಳ್ಳುವ ನಿರ್ಧಾರ ತೆಗೆದುಕೊಂಡಿದ್ದಾರೆ.

 

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments