ಕೊಡಗು: ಬೃಹತ್ ಜಲ ಸಂರಕ್ಷಣಾ ಅಭಿಯಾನದ ಪ್ರಯುಕ್ತ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗಮಂಡಲ ತಲಕಾವೇರಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಶ್ರೀ ಭಗಂಡೇಶ್ವರ ದೇಗುಲ ಹಾಗೂ ಕಾವೇರಿ, ಸುಜ್ಯೋತಿ, ಕನ್ನಿಕಾ ನದಿಗಳ ತ್ರಿವೇಣಿ ಸಂಗಮದಲ್ಲಿ ಪೂಜೆ ಸಲ್ಲಿಸಿ ಪವಿತ್ರ ತೀರ್ಥ ಸಂಗ್ರಹಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ, ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು. ಬೆಂಗಳೂರಿನಲ್ಲಿ ಇಂದು ಸಂಜೆ ನಡೆಯಲಿರುವ ‘ಕಾವೇರಿ ಆರತಿ’ಯ ಪುಣ್ಯ ಕಾರ್ಯಕ್ರಮದ ವೇಳೆ ಸಾರ್ವಜನಿಕರಿಗೆ ಈ ತೀರ್ಥ ವಿತರಿಸಲಾಗುವುದು.


