ಧಾರವಾಡದ ಅಣ್ಣಿಗೇರಿಯ ಭದ್ರಾಪೂರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂಬದಿಗೆ ಟವೇರಾ ಕಾರ್ ಡಿಕ್ಕಿ ಹೊಡೆದಿದೆ.
ಇಲ್ಲಿನ ಹೊಸಪೇಟೆ ಹುಬ್ಬಳ್ಳಿ ಮಾರ್ಗದಲ್ಲಿ ಡಿಕ್ಕಿ ಹೊಡೆದ ರಭಸಕ್ಕೆ ಮೂವರು ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ.
ಮೂವರು ಗಾಯಗೊಂಡಿದ್ದಾರೆ. ಅಪಘಾತ ಸ್ಥಳಕ್ಕೆ ಸ್ಥಳೀಯರು ಗಾಯಾಳುಗಳ ರಕ್ಷಣೆಗೆ ಮಾಡಿದ್ದಾರೆ.
ಪೊಲೀಸರ ನೆರವಿನಿಂದ ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಿದ್ದಾರೆ.
ಅಣ್ಣಿಗೇರಿ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ. ಮೃತರ ವಿವರಗಳನ್ನು ಕಲೆ ಹಾಕುತ್ತಿದ್ದಾರೆ