Tuesday, June 24, 2025
25.7 C
Bengaluru
Google search engine
LIVE
ಮನೆಕ್ರೈಂ ಸ್ಟೋರಿದೀಪಿಕಾ ಮರ್ಡರ್ ಸೀಕ್ರೆಟ್ : ಅವನ್ಯಾಕೆ ಕೊಂದ ಅಂದ್ರೆ..?

ದೀಪಿಕಾ ಮರ್ಡರ್ ಸೀಕ್ರೆಟ್ : ಅವನ್ಯಾಕೆ ಕೊಂದ ಅಂದ್ರೆ..?

ಮಂಡ್ಯ : ಮೇಲುಕೋಟೆ ಶಿಕ್ಷಕಿಯ ದೀಪಿಕಾ ಕೊಲೆ ಪ್ರಕರಣದ ಅಸಲಿ ಕಾರಣ ಬಟಾಬಯಲಾಗಿದೆ. ನನ್ನ ಹೆಂಡತಿ ನನ್ನನ್ನು ಮತ್ತು ಮಗುವನ್ನ ಒಂದು ಗಂಟೆಯೂ ಬಿಟ್ಟೇ ಇರುತ್ತಿರಲಿಲ್ಲ ಎಂದು ಆಕೆಯ ಪತಿ ಹೇಳಿದ್ದ. ಆದ್ರೀಗ ಕೊಲೆ ಕೇಸಿಗೆ ಸಂಬಂಧಪಟ್ಟ ರೋಚಕ ಅಂಶಗಳು ಹೊರಬಿದ್ದಿವೆ.  ಆರೋಪಿ ನಿತಿನ್ ನನ್ನ ಬಂಧಿಸಿರುವ ಪೊಲೀಸ್ರು ಹೇಳೋ ಕಥೆಯೇ ಬೇರೆ.

ಇತ್ತ ಆರೋಪಿ ಪೊಲೀಸ್ರ ಬಳಿ ಅವಳು ಕರೆದಾಗ ನಾನು ಹೋಗ್ತಾ ಇದ್ದೇ, ಆದ್ರೆ ನಾನು ಕರೆದಾಗ ಬರ್ತಾ ಇರಲಿಲ್ಲ ಅಂತ ಸ್ಟೇಟ್ ಮೆಂಟ್ ಕೊಟ್ಟಿದ್ದಾನೆ.

ಇದರ ಒಳ ಅರ್ಥಗಳು ಅನೇಕ ಇನ್ನು ಮೃತಳ ತಮ್ಮ ಮೃತ ದೀಪಿಕಾಳ ತಮ್ಮ ನಿತಿನ್ ಯಾವಾಗಲೂ ಅಕ್ಕ ಅಕ್ಕ ಅಂತಿದ್ನಂತೆ.. ಆಗಾದ್ರೆ, ಬೆಟ್ಟದ ಸಾಲುಗಳಲ್ಲಿ ಕದ್ದು ಮುಚ್ಚಿ ಅಕ್ಕ ತಮ್ಮನಿಗೆ ಏನು ಕೆಲಸವಿತ್ತು ಅನ್ನೋದು ಊರವರ ಪ್ರಶ್ನೆ.. ಹೌದು..ಅವಳು ಕರೆದಾಗೆಲ್ಲಾ ನಿತಿನ್ ಹೋಗುತ್ತಿದ್ದ..ಶಾಲೆ ಮುಗಿಸಿಕೊಂಡು ಬರುವಾಗ ಹೋಗುವಾಗ ಇಬ್ಬರು ಸಾಕಷ್ಟು ಬಾರಿ ಭೇಟಿಯನ್ನು ಮಾಡಿದ್ರು.. ಆದ್ರೆ, ದೀಪಿಕಾ ಗಂಡ ಮಾತ್ರ ಅವಳಿಗೂ ಅವನಿಗೂ ಸ್ನೇಹ ಏನು ಇರಲಿಲ್ಲ ಜಸ್ಟ್ ಪರಿಚಯವಷ್ಟೆ ಅಂತ ಹೇಳಿದ್ದ.

ಅದೆಲ್ಲಾ ಸುಳ್ಳು ಅನ್ನೋದು ಇದೀಗ ಬಹುತೇಕ ಸಾಬೀತಾಗಿದೆ.. ಆರೋಪಿ ಎಳೆ ಎಳೆಯನ್ನೂ ಪೊಲೀಸ್ರ ಮುಂದೆ ಬಿಚ್ಚಿಟ್ಟಿದ್ದಾನೆ.. ಅತಿಯಾದ ಸಲುಗೆ ಅತಿರೇಕಕ್ಕೆ ತಿರುಗಿದಾಗ ಏನೆಲ್ಲಾ ಅನರ್ಥಗಳು ಸಂಭವಿಸುತ್ತವೆ ಎನ್ನುವುದಕ್ಕೆ ಶಿಕ್ಷಕಿ ದೀಪಿಕಾ ಕೊಲೆ ಪ್ರಕರಣ ಸಾಕ್ಷಿಯಾಗಿದೆ… ಅಕ್ಕ.. ಅಕ್ಕ.. ಎಂದೇ ಹಿಂದೆ ತಿರುಗುತ್ತಿದ್ದ ಯುವಕನೇ ಆಕೆಯ ಉಸಿರುಗಟ್ಟಿಸಿ ಸಾಯಿಸಿ ಮಣ್ಣಿನಲ್ಲಿ ಸಮಾಧಿ ಮಾಡಿದವನು ಅರೆಸ್ಟಾಗಿ ಜೈಲು ಸೇರಿದ್ದಾನೆ.

ಕೊಲೆಯಾಕೆ ಆಗಿದೆ..ಕೊಂದಿದ್ದಕ್ಕೆ ಕಾರಣವೇನು..ಅವರಿಬ್ಬರ ನಡುವೆ ಇದ್ದ ಸಂಬಂಧವಾದ್ರೂ ಎಂತದ್ದು ಎಲ್ಲವೂ ರಿವೀಲ್ ಆಗಿ ಹೋಗಿದೆ.. ಶಿಕ್ಷಕಿ ದೀಪಿಕಾ ಹತ್ಯಾ ಕೇಸಿದ ಅಧ್ಯಾಯದ ಪುಟಗಳನ್ನ ತೆರೆದರೆ ಅಲ್ಲಿ ಕಾಣೋದು ಹಂತಕನ ವಿಕೃತ ಮನಸ್ಥಿತಿ..ಮತ್ತವಳ ಅಸಲಿ ಲೈಫ್ ಸ್ಟೈಲ್.

ದೀಪಿಕಾಳನ್ನು ಕೊಲೆ ಮಾಡಿ ಪರಾರಿಯಾಗಿದ್ದ ನಿತೀಶ್, ಹೊಸಪೇಟೆಯಲ್ಲಿರುವ ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ಮುರಳಿ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ವಶಕ್ಕೆ ಪಡೆದು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. .. ವಿಚಾರಣೆ ವೇಳೆ ನಿತಿನ್ ಹೇಳಿರೋದು ಇಷ್ಟು.

ಮಾಣಿಕ್ಯನಹಳ್ಳಿ ಗ್ರಾಮದ ವೆಂಕಟೇಶ್ ಪುತ್ರಿ ದೀಪಿಕಾ ಅದೇ ಗ್ರಾಮದ ಲೋಕೇಶ್‌ನನ್ನು ಪ್ರೀತಿಸಿ ಮದುವೆಯಾಗಿದ್ದರು. ಇವರಿಗೆ ಮಗು ಕೂಡ ಇತ್ತು. ಮೇಲುಕೋಟೆ ಎಸ್‌ಇಟಿ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ದೀಪಿಕಾಗೆ ಸ್ವಗ್ರಾಮದ ನಿತೀಶ್‌ಕುಮಾರ್ ಎಂಬ ಯುವಕ ಪರಿಚಿತನಾಗಿದ್ದ. ದೀಪಿಕಾರನ್ನು ಅಕ್ಕ.. ಅಕ್ಕ.. ಎಂದು ಕರೆಯುತ್ತಾ ಮನೆಗೆಲ್ಲಾ ಬರುತ್ತಿದ್ದೆ.

ಆಪ್ತ ಸ್ನೇಹಿತರಂತಿದ್ದ ದೀಪಿಕಾ ಮತ್ತು ನಿತೀಶ್ ನಡುವೆ ಫೋನ್ ಸಂಭಾಷಣೆ, ಆಗಾಗ ಭೇಟಿಯಾಗುವುದು, ಸಲುಗೆಯಿಂದ ಮಾತನಾಡುವುದು ಮುಂದುವರೆದಿತ್ತು. ಇವರಿಬ್ಬರ ನಡುವಿನ ಸಲುಗೆ ಕುಟುಂಬದವರಿಗೆ ಸರಿಕಂಡಿರಲಿಲ್ಲ. ಈ ವಿಚಾರವಾಗಿ ನಿತೀಶ್‌ಗೆ ಎಚ್ಚರಿಕೆಯನ್ನೂ ನೀಡಿದ್ದರು. ನಿತೀಶ್ ಜೊತೆಗಿನ ಸಲುಗೆ ಕುರಿತು ದೀಪಿಕಾರನ್ನು ಪ್ರಶ್ನಿಸಿದಾಗ ಆತ ನನ್ನ ತಮ್ಮ ಇದ್ದಂತೆ ಎಂದು ಹೇಳಿಕೊಂಡಿದ್ದರು.

ಕುಟುಂಬಸ್ಥರು ನೀಡಿದ ಎಚ್ಚರಿಕೆಯಿಂದ ದೀಪಿಕಾ ಎಚ್ಚೆತ್ತುಕೊಂಡು ನಿತೀಶ್‌ನಿಂದ ಅಂತರ ಕಾಯ್ದುಕೊಂಡಿದ್ದರು. ವಾರದಿಂದ ಫೋನ್ ಕರೆ ಮಾಡಿದರೆ ಸ್ವೀಕರಿಸದಿರುವುದು, ಆತ ಭೇಟಿಯಾಗಲು ಬಯಸಿದಾಗ ಸಿಗದೆ ಓಡಾಡುವುದು ಮಾಡುತ್ತಿದ್ದರು. ದೀಪಿಕಾ ತನ್ನಿಂದ ದೂರವಾಗುತ್ತಿರುವುದನ್ನು ಕಂಡು ನಿತೀಶ್‌ಗೆ ಸಹಿಸಲಾಗಿರಲಿಲ್ಲ. ನಿತೀಶ್ ಹುಟ್ಟುಹಬ್ಬಕ್ಕೆ ಶರ್ಟ್‌ವೊಂದನ್ನು ಗಿಫ್ಟ್ ನೀಡುವುದಾಗಿ ಹೇಳಿದ್ದ ದೀಪಿಕಾ ಅದನ್ನೂ ಕೊಡಿಸಿರಲಿಲ್ಲ. ಹುಟ್ಟುಹಬ್ಬದ ದಿನ ಭೇಟಿಗೂ ಸಿಕ್ಕಿರಲಿಲ್ಲವೆಂದು ಹೇಳಲಾಗಿದೆ.

ದೀಪಿಕಾ ನಡವಳಿಕೆಯಿಂದ ನಿತೀಶ್ ಕ್ರೋಧಗೊಂಡು ಕೊಲೆ ಮಾಡಲು ಮೊದಲೇ ತಯಾರಿ ಮಾಡಿಕೊಂಡಿದ್ದನು. ಒಂದು ದಿನ ಮೊದಲೇ ಶ್ರೀಯೋಗಾನರಸಿಂಹಸ್ವಾಮಿ ಬೆಟ್ಟದ ತಪ್ಪಲಿನಲ್ಲೇ ಗುಂಡಿಯನ್ನು ತೆಗೆದು ಅದೇ ಸ್ಥಳದಲ್ಲೇ ಕೊಲೆ ಮಾಡುವುದಕ್ಕೆ ನಿಶ್ಚಯ ಮಾಡಿಕೊಂಡಿದ್ದನು. ಜ.೨೦ರಂದು ದೀಪಿಕಾರನ್ನು ಮೊಬೈಲ್ ಮೂಲಕ ನಿತೀಶ್ ಸಂಪರ್ಕಿಸಿದ್ದನು. ಆದರೂ ಭೇಟಿಗೆ ಸಿಕ್ಕಿರಲಿಲ್ಲ. ಶಾಲೆಯಲ್ಲಿ ಕರ್ತವ್ಯ ಮುಗಿಸಿ ವಾಪಸಾಗುವ ವೇಳೆ ಆಕೆಯನ್ನು ಅಡ್ಡಗಟ್ಟಿದ ನಿತೀಶ್, ದೂರಕ್ಕೆ ಕರೆದೊಯ್ದಿದ್ದಾನೆ. ಅಲ್ಲಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳಕ್ಕೆ ತಿರುಗಿದೆ. ನಿತೀಶ್ ಆಕ್ರೋಶದಿಂದ ದೀಪಿಕಾರ ಮೇಲೆ ಹಲ್ಲೆ ನಡೆಸಿ ಕೊನೆಗೆ ವೇಲ್‌ನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆಂದು ತಿಳಿದುಬಂದಿದೆ.

ದೀಪಿಕಾ ಶವವನ್ನು ಮೊದಲೇ ತೆಗೆದಿದ್ದ ಗುಂಡಿಯಲ್ಲಿ ಹೂತಿಟ್ಟು ನಿತೀಶ್ ಊರಿಗೆ ಹಿಂತಿರುಗಿದ್ದನು. ಎರಡು ದಿನ ಯಾರಿಗೂ ಅನುಮಾನ ಬರದಂತೆ ನಡೆದುಕೊಂಡಿದ್ದನು. ಕುಟುಂಬಸ್ಥರು ದೀಪಿಕಾ ನಾಪತ್ತೆಯಾಗಿರುವ ಕುರಿತು ಪೊಲೀಸರಿಗೆ ದೂರು ನೀಡಿದ್ದರು. ಈ ದೂರನ್ನು ಆಧರಿಸಿ ಪೊಲೀಸರು ತನಿಖೆ ನಡೆಸಿದಾಗ ದೀಪಿಕಾ ಸ್ಕೂಟರ್ ಮಾತ್ರ ಪತ್ತೆಯಾಗಿತ್ತು.

ಮತ್ತಷ್ಟು ಹುಡುಕಾಟ ನಡೆಸಿದಾಗ ಎರಡು ದಿನದ ಬಳಿಕ ಶ್ರೀಯೋಗಾನರಸಿಂಹಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಮಣ್ಣುಗುಡ್ಡೆಯ ಬಳಿ ನೊಣಗಳು ಮುತ್ತಿಕೊಂಡು ದುರ್ವಾಸನೆ ಬರುತ್ತಿತ್ತು. ಆ ಸ್ಥಳದಲ್ಲಿ ಮಣ್ಣು ತೆಗೆದಾಗ ದೀಪಿಕಾ ಮೃತದೇಹ ಪತ್ತೆಯಾಗಿತ್ತು.

ಇದೇ ಸಮಯಕ್ಕೆ ನಿತೀಶ್ ಹಾಗೂ ದೀಪಿಕಾ ಜಗಳವಾಡುವ ದೃಶ್ಯವನ್ನು ಅವರ ಗಮನಕ್ಕೆ ಬಾರದಂತೆ ಪ್ರವಾಸಿಗರೊಬ್ಬರು ಸೆರೆ ಹಿಡಿದಿದ್ದರು. ದೀಪಿಕಾ ಪತಿ ಲೋಕೇಶ್ ಆ ವಿಡಿಯೋ ನೋಡಿ ನಿತೀಶ್ ಮೇಲೆ ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದರು. ಆ ವೇಳೆಗೆ ನಿತೀಶ್ ಗ್ರಾಮದಿಂದ ಪರಾರಿಯಾಗಿದ್ದನು. ನಿತೀಶ್ ತಂದೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಆರೋಪಿ ಇರುವಿಕೆಯನ್ನು ಪತ್ತೆಹಚ್ಚಿ ಪೊಲೀಸರು ಬಂಧಿಸಿದ್ದಾರೆ.

 

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments