ಜಿಲ್ಲೆ

ಡಿಕೆಶಿ ಸಂವಿಧಾನ ಹೇಳಿಕೆ..ಬಿಜೆಪಿ ಗರಂ

ಹುಬ್ಬಳ್ಳಿ: ಸಂವಿಧಾನ ಬದಲಾವಣೆ ಹೇಳಿಕೆ ನೀಡಿರುವ ಆರೋಪದಲ್ಲಿ ಡಿಸಿಎಂ ಡಿಕೆ ಶಿವಕುಮಾರ್​ ವಿರುದ್ಧ ಹುಬ್ಬಳ್ಳಿ ಬಿಜೆಪಿ ಘಟಕ ಬೀದಿಗಿಳಿದು ಪ್ರತಿಭಟನೆ ನಡೆಸಿತು.

ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್​ನಲ್ಲಿ ಪ್ರತಿಭಟನೆ ನಡೆಸಿ, ಡಿಸಿಎಂ ಸೇರಿ ಕೈ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಶಾಸಕ ಮಹೇಶ್​ ಟೆಂಗಿನಕಾಯಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಡಿಸಿಎಂ ಡಿಕೆಶಿ ಭಾವಚಿತ್ರವಿರೋ ಪೋಸ್ಟ್​ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ರು. ಕೂಡಲೇ ಡಿಸಿಎಂ ಡಿಕೆಶಿ ರಾಜ್ಯದ ಜನರ ಕ್ಷಮೆ ಕೇಳಿ ರಾಜೀನಾಮೆ ನೀಡಲು ಬಿಜೆಪಿಗರು ಒತ್ತಾಯಿಸಿದರು.

Comments (0)

Your email address will not be published. Required fields are marked *

Back to top button