Thursday, November 20, 2025
19.5 C
Bengaluru
Google search engine
LIVE
ಮನೆರಾಜಕೀಯನಳಿನ್​ ಕುಮಾರ್​​ ಕಟೀಲ್​ಗೆ ರಾಜಕೀಯ ಸ್ಥಾನಮಾನ ಸಿಗಲಿ; ಡಿಕೆಶಿ ಪ್ರಾರ್ಥನೆ

ನಳಿನ್​ ಕುಮಾರ್​​ ಕಟೀಲ್​ಗೆ ರಾಜಕೀಯ ಸ್ಥಾನಮಾನ ಸಿಗಲಿ; ಡಿಕೆಶಿ ಪ್ರಾರ್ಥನೆ

ಮಂಗಳೂರು: ರಾಜಕಾರಣದಲ್ಲಿ ಯಾವುದೂ ಶಾಶ್ವತ ಅಲ್ಲ. ಹೀರೋ ಝೀರೋ ಆಗುತ್ತಾನೆ, ಝೀರೋ ಹೀರೋ ಆಗುತ್ತಾನೆ. ನಳಿನ್ ಕುಮಾರ್ ಕಟೀಲ್‌ಗೆ ಮತ್ತೆ ರಾಜಕೀಯ ಸ್ಥಾನಮಾನ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಕೇರಳ ರಾಜ್ಯದ ಕಾಸರಗೋಡಿನ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಹಿನ್ನೆಲೆ ಡಿಕೆ ಶಿವಕುಮಾರ್ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ನಳಿನ್ ಕುಮಾರ್ ಕಟೀಲ್ ಹಾಗೂ ಡಿಕೆ ಶಿವಕುಮಾರ್ ಒಂದೇ ವೇದಿಕೆಯಲ್ಲಿ ಜೊತೆಯಾಗಿದ್ದರು. ಈ ವೇಳೆ ಮಾತನಾಡಿ, ನನ್ನ ಮಿತ್ರ, ಮಾಜಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಇದ್ದಾರೆ. ಅವರು ಮಾಜಿ ಅಂದುಕೊಳ್ಳೋದು ಬೇಡ, ರಾಜಕಾರಣದಲ್ಲಿ ಯಾವುದೂ ಶಾಶ್ವತ ಅಲ್ಲ. ಹೀರೋ ಝೀರೋ ಆಗುತ್ತಾನೆ, ಝೀರೋ ಹೀರೋ ಆಗುತ್ತಾನೆ. ನಾನು ಮತ್ತು ನೀವು ಒಂದೇ ವೇದಿಕೆಯಲ್ಲಿ ದೇವರನ್ನ ಪ್ರಾರ್ಥನೆ ಮಾಡಿದ್ದೇವೆ. ಭಗವಂತ ನಿಮ್ಮ ಎಲ್ಲಾ ವಿಘ್ನ ನಿವಾರಣೆ ಮಾಡಿ ಮತ್ತೆ ಈ ರಾಜ್ಯದಲ್ಲಿ ಸೇವೆ ಮಾಡುವ ಅವಕಾಶ ಕೊಡಲಿ. ಮತ್ತೆ ನಿಮಗೆ ಅವಕಾಶ ಸಿಗಲಿ ಅಂತ ನಾನೂ ಕೂಡ ಪ್ರಾರ್ಥನೆ ಮಾಡುತ್ತೇನೆ ಎಂದು ಹೇಳಿದರು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments