#Exclusive NewsTop Newsಜಿಲ್ಲೆಸುದ್ದಿ
ಬೆಂಗಳೂರಿನಲ್ಲಿ ಹೆಚ್ಚಾದ ಶ್ವಾನಗಳ ಕಾಟ….!

ಬೆಂಗಳೂರು : ರಸ್ತೆಯಲ್ಲಿ ಆಟವಾಡುತ್ತಿದ್ದ ಬಾಲಕನ ಮೇಲೆ ಗುಂಪು ಗುಂಪಾಗಿ ಬೀದಿ ನಾಯಿಗಳು ದಾಳಿ ಮಾಡಿದ ಘಟನೆ ಬೆಂಗಳೂರಿನ ಕೆಆರ್ ಪುರಂನ ಸೊನ್ನೆನಹಳ್ಳಿಯಲ್ಲಿ ನಡೆದಿದೆ.
ನಾಯಿಗಳು ಅಟ್ಯಾಕ್ ಮಾಡುತ್ತಿದ್ದಂತೆ ತಪ್ಪಿಸಿಕೊಳ್ಳುವ ಸಲುವಾಗಿ ಬಾಲಕ ಓಡಿದ್ದಾನೆ. ಬಾಲಕ ಓಡುತ್ತಿದ್ದಂತೆ ಶ್ವಾನಗಳು ಆತನನ್ನು ಅಟ್ಟಾಡಿಸಿವೆ. ಈ ವೇಳೆ ತಪ್ಪಿಸಿಕೊಳ್ಳುವಾಗ ಬಾಲಕ ನೆಲದ ಮೇಲೆ ಬಿದ್ದಿದ್ದಾನೆ. ಈ ಸಂದರ್ಭ ನಾಯಿಗಳು ಬಾಲಕನ ಮೇಲೆ ಎರಗಿವೆ.
ನಾಯಿಗಳು ತನ್ನ ಮೇಲೆ ಎರಗುತ್ತಿದ್ದಂತೆ ಕೂಡಲೇ ಬಾಲಕ ಕಿರುಚಿಕೊಂಡಿದ್ದು, ಕಿರುಚಾಟ ಕೇಳಿ ಸ್ಥಳೀಯರು ಆಗಮಿಸಿದ್ದಾರೆ. ಸ್ಥಳೀಯರು ಬಂದು ನಾಯಿಗಳನ್ನು ಓಡಿಸಿದ ಹಿನ್ನೆಲೆ ಭಾರೀ ಅನಾಹುತ ತಪ್ಪಿದೆ. ಬಾಲಕನ ಮೇಲೆ ಶ್ವಾನಗಳು ದಾಳಿ ನಡೆಸಿದ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.




