Thursday, November 20, 2025
19.5 C
Bengaluru
Google search engine
LIVE
ಮನೆUncategorizedಎಲೆಕ್ಟ್ರೋಲ್ ಬಾಂಡ್ ಸುಪ್ರೀಂ ತೀರ್ಪು: ಸತ್ಯಕ್ಕೆ ಸಾವಿಲ್ಲ ಎಂದ ಈಶ್ವರ ಖಂಡ್ರೆ

ಎಲೆಕ್ಟ್ರೋಲ್ ಬಾಂಡ್ ಸುಪ್ರೀಂ ತೀರ್ಪು: ಸತ್ಯಕ್ಕೆ ಸಾವಿಲ್ಲ ಎಂದ ಈಶ್ವರ ಖಂಡ್ರೆ

ಬೆಂಗಳೂರು :  ಫೆ.15: ಎಲೆಕ್ಟ್ರೋಲ್ ಬಾಂಡ್ ಗಳು ಅಸಾಂವಿಧಾನಿಕ ಮತ್ತು ಕೂಡಲೇ ಇದನ್ನು ಸ್ಥಗಿತಗೊಳಿಸಬೇಕು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿರುವುದನ್ನು ಸ್ವಾಗತಿಸುತ್ತೇನೆ. ಈ ಬಾಂಡ್ ಯೋಜನೆ ಮಾಹಿತಿ ಹಕ್ಕಿನ ಉಲ್ಲಂಘನೆಯಾಗಿದ್ದು, ಪರೋಕ್ಷ ಭ್ರಷ್ಟಾಚಾರವಾಗಿತ್ತು ಎಂದು ಅರಣ್ಯ ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಪ್ರತಿಕ್ರಿಯೆ ನೀಡಿದ್ದಾರೆ.

ದೇಣಿಗೆ ಕೊಟ್ಟವರ ಹೆಸರು ಗೌಪ್ಯವಾಗಿಡುವುದು, ಆಡಳಿತದಲ್ಲಿರುವ ಒಂದು ಪಕ್ಷ ಇದರ ಸಂಪೂರ್ಣ ಪ್ರಯೋಜನ ಪಡೆಯುವುದು ಪ್ರಜಾಪ್ರಭುತ್ವ ಮತ್ತು ಚುನಾವಣಾ ವ್ಯವಸ್ಥೆಯ ಮೂಲ ಉದ್ದೇಶವನ್ನೇ ಬುಡಮೇಲು ಮಾಡುತ್ತಿತ್ತು. ಇದನ್ನು ಕಾಂಗ್ರೆಸ್ ಮೊದಲಿನಿಂದಲೂ ವಿರೋಧಿಸುತ್ತಾ ಬಂದಿದೆ ಎಂದು ಅವರು ತಿಳಿಸಿದ್ದಾರೆ.

ಸುಪ್ರೀಂಕೋರ್ಟ್ ನ ಈ ತೀರ್ಪು ನ್ಯಾಯಾಂಗ ವ್ಯವಸ್ಥೆಯ ಮೇಲೆ ಜನರು ಇಟ್ಟಿದ್ದ ನಂಬಿಕೆ ಮತ್ತು ವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷರೂ ಆದ ಈಶ್ವರ ಖಂಡ್ರೆ ಹೇಳಿದ್ದಾರೆ. ಸತ್ಯಮೇವ ಜಯತೆ – ಸತ್ಯಕ್ಕೆ ಯಾವತ್ತೂ ಸಾವಿಲ್ಲ. ಕೊನೆಗೂ ನ್ಯಾಯ ದೊರಕಿದೆ. ಈವರೆಗೆ ನೀಡಲಾಗಿರುವ ಎಲ್ಲ ಎಲೆಕ್ಟ್ರೋಲ್ ಬಾಂಡ್ ಗಳ ಮಾಹಿತಿ ಬಹಿರಂಗ ಪಡಿಸಬೇಕು ಎಂದೂ ಅವರು ಒತ್ತಾಯಿಸಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments