Tuesday, June 24, 2025
25.9 C
Bengaluru
Google search engine
LIVE
ಮನೆ#Exclusive NewsTop Newsಬಸನಗೌಡ ದದ್ದಲ್‌ಗೆ ಇ.ಡಿ ಬಂಧನ‌ ಭೀತಿ – ರಾಯಚೂರಿನಿಂದ ಅವಸರದಲ್ಲಿ ಹೊರಟಿದ್ದೆಲ್ಲಿಗೆ?

ಬಸನಗೌಡ ದದ್ದಲ್‌ಗೆ ಇ.ಡಿ ಬಂಧನ‌ ಭೀತಿ – ರಾಯಚೂರಿನಿಂದ ಅವಸರದಲ್ಲಿ ಹೊರಟಿದ್ದೆಲ್ಲಿಗೆ?

ರಾಯಚೂರು: ಮಹರ್ಷಿ ವಾಲ್ಮೀಕಿ ನಿಗಮದ 187 ಕೋಟಿ ರೂಪಾಯಿ ಹಗರಣದ ಪ್ರಕರಣ ಹಿನ್ನೆಲೆ ಇ.ಡಿ‌ ಬಂಧನ ಭೀತಿಯಲ್ಲಿರುವ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ರಾತ್ರೋರಾತ್ರಿ ರಾಯಚೂರಿಗೆ ಆಗಮಿಸಿ ಬೆಳಗ್ಗೆಯೇ ನಗರದಿಂದ ಕಾಲ್ಕಿತ್ತಿದ್ದಾರೆ.

ಬೆಳಗ್ಗೆ ಯಾರನ್ನೂ ಭೇಟಿಯಾಗದೆ ಮನೆಯಿಂದ ಅವಸರಲ್ಲಿ ಕಾರು ಹತ್ತಿ ಪ್ರಯಾಣ ಮಾಡಿದ್ದಾರೆ. ಮಾಧ್ಯಮದವರಿಂದ ತಪ್ಪಿಸಿಕೊಂಡು ವೇಗವಾಗಿ ಕಾರಿನಲ್ಲಿ ಹೊರಟು ಹೋಗಿದ್ದಾರೆ. ‌ಮಂತ್ರಾಲಯ ರಸ್ತೆ ಮಾರ್ಗವಾಗಿ ಬೆಂಗಳೂರು ಕಡೆಗೆ ತಮ್ಮ‌ ಆಪ್ತರ ಜೊತೆ ಹೊರಟಿದ್ದಾರೆ.

ಮಾರ್ಗಮಧ್ಯೆ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಗಿಲ್ಲೆಸುಗೂರಿನಲ್ಲಿ ಕೆಲ ಕಾರ್ಯಕರ್ತರನ್ನ ಭೇಟಿಯಾಗಿ ಮುಂದೆ ತೆರಳಿದ್ದಾರೆ. ತಮ್ಮ ಕಾರನ್ನ ಬಿಟ್ಟು ಕಾರ್ಯಕರ್ತನ ಕ್ರೇಟಾ ಕಾರ್‌ನಲ್ಲಿ ಬಸನಗೌಡ ದದ್ದಲ್‌ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ.

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ದದ್ದಲ್‌ಗೆ ಈಗಾಗಲೇ ಜಾರಿ ನಿರ್ದೇಶನಾಲಯ ನೋಟಿಸ್‌ ನೀಡಿದೆ. ಇ.ಡಿ ಬಂಧನ ಭೀತಿಯಲ್ಲಿರುವ ಶಾಸಕರಿದ್ದಾರೆ. ಪ್ರಕರಣ ಸಂಬಂಧ ಮಾಜಿ ಸಚಿವ ನಾಗೇಂದ್ರರನ್ನು ಬಂಧಿಸಿರುವ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

 

ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments