ಬೆಳಗಾವಿ: ಜಿಲ್ಲೆಯ ನಿಪ್ಪಾಣಿಯ ಹೊರವಲಯದಲ್ಲಿರುವ ಹಾಲಸಿದ್ದನಾಥ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಬಾಯ್ಲರ್ನಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿ ಕ್ಷಣಾರ್ಧದಲ್ಲಿ ಕಾರ್ಖಾನೆಗೆ ವ್ಯಾಪಕವಾಗಿ ಹರಡಿದೆ. ಬೆಂಕಿಯಿಂದ 24 ಟನ್ ಸಾಮರ್ಥ್ಯದ ಬಾಯ್ಲರ್ ಹೊತ್ತಿ ಉರಿದಿದೆ.
ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಂದಾಜು 5 ಕೋಟಿ ರೂ. ಮೌಲ್ಯದ ಆಸ್ತಿ ಬೆಂಕಿಗಾಹುತಿಯಾಗಿದೆ. ಕಾರ್ಖಾನೆಯಲ್ಲಿನ ಅಗ್ನಿ ನಂದಿಸಲು ಸ್ಥಳದಲ್ಲಿ 9 ಅಗ್ನಿಶಾಮಕ ವಾಹನ ನಿಯೋಜಿಸಲಾಗಿತ್ತು. ನಿಪ್ಪಾಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.